ಬಂದೂಕು ತೋರಿಸಿ ಅತ್ಯಾಚಾರ: ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ !
ತಾನು ವಿಡಿಯೋವನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದ.
Team Udayavani, Mar 29, 2022, 3:17 PM IST
ಬಿಹಾರ: ಬಿಹಾರದ ಕಬೀರ್ಪುರನಲ್ಲಿ ಕೆಲವು ತಿಂಗಳ ಹಿಂದೆ ಕೋವಿಡ್ -19 ಲಾಕ್ಡೌನ್ ಸಮಯದಲ್ಲಿ ನೀರು ತುಂಬಲು ಹೋದಾಗ ಮಹಿಳೆಯೊಬ್ಬರನ್ನು ಬಂದೂಕು ತೋರಿಸಿ ಯುವಕನೋರ್ವ ಅತ್ಯಾಚಾರವೆಸಗಿದ್ದ ಘಟನೆ ಈಗ ಬೆಳಕಿಗೆ ಬಂದಿದೆ. ಆಕೆ ನೀಡಿದ ದೂರಿನ ಪ್ರಕಾರ, ದುಷ್ಕರ್ಮಿಯು ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ನಂತರ ತಿಂಗಳವರೆಗೆ ಅವಳನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ತಾನು ವಿಡಿಯೋವನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದ. ಆ ನೆಪದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಆಕೆಯೊಂದಿಗೆ ಹಲವು ಬಾರಿ ಅನುಚಿತವಾಗಿ ವರ್ತಿಸಿದ್ದಾನೆ. ಇರ್ಫಾನ್ ಎಂಬ ಆ ವ್ಯಕ್ತಿ ಸಂತ್ರಸ್ತೆಯನ್ನು ಪ್ರತಿದಿನ ಯಾವುದಾದರೂ ಸ್ಥಳಕ್ಕೆ ಕರೆಸುತ್ತಿದ್ದ ಎಂದು ಆಕೆ ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ.
ಆತ ಮತ್ತೊಮ್ಮೆ ತನ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಅವಳು ವಿರೋಧಿಸಿದಾಗ, ಅವನು ವೀಡಿಯೊವನ್ನು ವೈರಲ್ ಮಾಡಿ ಇಡೀ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಎಂದು ಆಕೆ ಆರೋಪಿಸಿದ್ದಾಳೆ.
ಈ ಕಿರುಕುಳ ತಾಳದೆ ಸೋಮವಾರ (ಮಾರ್ಚ್ 28) ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಆರೋಪಿ ಇರ್ಫಾನ್ ಪುನರಾವರ್ತಿತ ಅಪರಾಧಿ ಮತ್ತು ಆ ಪ್ರದೇಶದಲ್ಲಿ ಹಲವಾರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆದರೆ ಭಯದಿಂದ ಯಾರೂ ಅವನ ವಿರುದ್ಧ ಮಾತನಾಡಲಿಲ್ಲ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿಗೂ ತಿಳಿಸಿದ್ದಾಳೆ ಎನ್ನಲಾಗಿದೆ.
ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಪೊಲೀಸರ ಜೊತೆ ಹೇಳಿಕೊಂಡಿದ್ದು, ಹಲವಾರು ಸಾಮಾಜಿಕ ಕಾರ್ಯಕರ್ತರು ಮತ್ತು ಸ್ಥಳೀಯ ಪ್ರತಿನಿಧಿಗಳು ಆಕೆಯ ಬೆಂಬಲಕ್ಕೆ ನಿಂತಿದ್ದಾರೆ ಮತ್ತು ಪ್ರಕರಣದಲ್ಲಿ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ದೂರನ್ನು ಸ್ವೀಕರಿಸಿದ ಬಿಹಾರ ಪೊಲೀಸರು ತನಿಖೆ ನಡೆಸಿದ ನಂತರ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..
DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.