Crime: ರಜೆಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು

ಕ್ರೈಮ್‌ ಶೋ ನೋಡಿ ಕೃತ್ಯವೆಸಗಿದ ಬಾಲಕರು.!

Team Udayavani, Aug 25, 2024, 1:24 PM IST

Crime: ರಜೆಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು

ದೆಹಲಿ: ಮದರಸಾದಲ್ಲಿ ಕಲಿಯುತ್ತಿದ್ದ 5 ವರ್ಷದ ಬಾಲಕನೊಬ್ಬ ಅನುಮನಾಸ್ಪದ ರೀತಿ ಸಾವನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಹಿಂದಿನ ಅಸಲಿಯತ್ತು ತನಿಖೆಯಲ್ಲಿ ಬಯಲಾಗಿದೆ.

ಏನಿದು ಘಟನೆ?: ಶುಕ್ರವಾರ (ಆ.23ರಂದು) ರಾತ್ರಿ 10 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ ದೈಲಾಪುರ ಪ್ರದೇಶದಲ್ಲಿರುವ ತಲೀಮುಲ್ ಖುರಾನ್‌ ಮದರಸಾದಿಂದ 5 ವರ್ಷದ ಬಾಲಕನ ತಾಯಿಗೆ ಕರೆ ಮಾಡಿ ನಿಮ್ಮ ಮಗನಿಗೆ ಹುಷಾರ್‌ ಇಲ್ಲವೆಂದು  ಹೇಳಲಾಗಿದೆ. ಕೂಡಲೇ ತಾಯಿ ಮದರಸಾದ ಬಳಿ ಬಂದು ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಗನ ಕುತ್ತಿಗೆ, ಬೆನ್ನು ಮತ್ತು ಸೊಂಟದ ಹಾಗೂ ತೊಡೆಸಂದುಗಳಲ್ಲಿ ಗಾಯಗಳಿತ್ತು. ಇದನ್ನು ನೋಡಿ ಅನುಮಾನಗೊಂಡ ತಾಯಿ ಮಗನ ಮೃತದೇಹವನ್ನು ಮದರಸಾಕ್ಕೆ ತಂದು ಅಲ್ಲಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕ ಅನಾರೋಗ್ಯದಿಂದ ಮೃತಪಟ್ಟಿರುವುದು ಅಲ್ಲವೆನ್ನುವುದು ಗೊತ್ತಾಗಿದೆ. ವಿದ್ಯಾರ್ಥಿಗೆ ಹಲ್ಲೆಗೈದ ಪರಿಣಾಮ ಗಂಭೀರವಾಗಿ ದೇಹದೊಳಗೆ ಗಾಯಗಳಾಗಿದೆ. ಇದರಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ದೆಹಲಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಪೊಲೀಸರು ಮದರಸಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ವಿದ್ಯಾರ್ಥಿಯ ಸ್ನೇಹಿತರು ಮತ್ತು ಇತರ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ಕೇಳಿದ್ದಾರೆ. ಅನುಮಾನಗೊಂಡ ಪೊಲೀಸರು ಮೂವರು ಬಾಲಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದಾಗ 11 ವರ್ಷದ ಮತ್ತು 9 ವರ್ಷದ ಮೂವರು ಬಾಲಕರು ಅಪರಾಧವೆಸಗಿರುವುದಾಗಿ ತಪ್ಪೋಪ್ಪಿಕೊಂಡಿದ್ದಾರೆ.

ಕೊಲೆ ಮಾಡಿದ್ದು ಯಾಕೆ?: ಮೂವರು ಬಾಲಕರು ರಜೆ ಪಡೆದು ಮನೆಗೆ ಭೇಟಿ ನೀಡಲು ಬಯಸಿದ್ದರು. ಹೀಗಾಗಿ ತಮ್ಮನ್ನು ಹೆಸೆರಿಟ್ಟು ಕರೆಯುತ್ತಿದ್ದ ನಿರ್ದಿಷ್ಟ ಬಾಲಕನನ್ನು ಗುರಿಯಾಗಿಸಿಕೊಂಡು ಈ ಕೃತ್ಯವನ್ನುವೆಸಗಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ.

ಕೃತ್ಯಕ್ಕೆ ನೆರವಾದ ಕ್ರೈಮ್‌ ಶೋ: ಕ್ರೈಮ್‌ ಶೋವೊಂದನ್ನು ನೋಡಿದ ಮೂವರು ಬಾಲಕನನ್ನು ಹತ್ಯೆಗೈಯುವ ಯೋಜನೆಯನ್ನು ಹಾಕಿಕೊಂಡಿದ್ದರು. ಕ್ರೈಮ್‌ ಶೋ ನೋಡಿ ಪ್ರೇರಣೆಗೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಮದರಸಾಕ್ಕೆ ಬೀಗ ಹಾಕಲಾಗಿದ್ದು, ಎಲ್ಲ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಪೊಲೀಸರು ಬಾಲನ್ಯಾಯ ಮಂಡಳಿಯ ಕಾನೂನು ಪ್ರಕಾರ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.