Cyber fraud: ವಾಟ್ಸಾಪ್ ಟ್ರೇಡಿಂಗ್ ವಂಚನೆಯಲ್ಲಿ 9.09 ಕೋಟಿ ರೂ ಕಳೆದುಕೊಂಡ ಉದ್ಯಮಿ
Team Udayavani, Jun 1, 2024, 4:33 PM IST
ನೋಯ್ಡಾ: ಸ್ಮಾರ್ಟ್ ಫೋನ್ ಗಳ ಕಾಲದಲ್ಲಿ ಸೈಬರ್ ಫ್ರಾಡ್ ಗಳು ಹೆಚ್ಚುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯಲ್ಲಿ ಮೋಸಗಳು ನಡೆಯುತ್ತಿವೆ. ನೋಯ್ಡಾದಲ್ಲಿ ಆನ್ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಸೈಬರ್ ವಂಚಕರು ವಾಟ್ಸಾಪ್ ಮೆಸೆಂಜರ್ ಮೂಲಕ ಉದ್ಯಮಿಯೊಬ್ಬರಿಗೆ ರೂ. 9 ಕೋಟಿಗೂ ಹೆಚ್ಚು ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಲೀಸರ ಪ್ರಕಾರ, ಸೆಕ್ಟರ್ 40 ರ ನಿವಾಸಿ ರಜತ್ ಬೋತ್ರಾ ಅವರು ಮೇ 1 ರಂದು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕುರಿತ ವಾಟ್ಸಾಪ್ ಗ್ರೂಪ್ ಗೆ ಸೇರಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ವಂಚನೆ ನಡೆದಿದೆ. ಸೆಕ್ಟರ್ ನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಶುಕ್ರವಾರ ರೂ 1.62 ಕೋಟಿ ವ್ಯವಹಾರದ ಹಣವನ್ನು ಉದ್ಯಮಿಯ ಖಾತೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು, ಹೆಚ್ಚಿನ ತನಿಖೆ ನಡೆಯುತ್ತಿದೆ.
‘‘ಮೇ 1ರಂದು ತನ್ನನ್ನು ವಾಟ್ಸಾಪ್ ಗ್ರೂಪ್ ಗೆ ಸೇರಿಸಿರುವುದಾಗಿ ಬೋತ್ರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರೂಪ್ ಗೆ ಷೇರು ಮಾರುಕಟ್ಟೆ ವಹಿವಾಟಿನಿಂದ ಲಾಭದ ಬಗ್ಗೆ ಮಾಹಿತಿ ಬರುತ್ತಿತ್ತು. ಅಂದಿನಿಂದ ಅವರು ಸಣ್ಣ ಪ್ರಮಾಣದ ಹೂಡಿಕೆಗಳನ್ನು ಪ್ರಾರಂಭಿಸಿದರು. ಮೇ 27 ರ ವೇಳೆಗೆ ಅವರು ಷೇರು ವಹಿವಾಟಿನಲ್ಲಿ ರೂ. 9.09 ಕೋಟಿ ಹೂಡಿಕೆ ಮಾಡಿದ್ದರು. ಆದಾಗ್ಯೂ, ಇದರ ನಂತರ, ಅವರ ಟ್ರೇಡಿಂಗ್ ಖಾತೆಯನ್ನು ಮುಚ್ಚಲಾಯಿತು” ಎಂದು ಸಹಾಯಕ ಪೊಲೀಸ್ ಆಯುಕ್ತ (ಸೈಬರ್ ಕ್ರೈಂ ಪೊಲೀಸ್ ಠಾಣೆ) ವಿವೇಕ್ ರಂಜನ್ ರೈ ಹೇಳಿದ್ದಾರೆ.
ನಮಗೆ ದೂರು ಬಂದ ತಕ್ಷಣ ತನಿಖೆ ಆರಂಭಿಸಿದ್ದು, ಈವರೆಗೆ ಅವರ ಬ್ಯಾಂಕ್ ಖಾತೆಯಲ್ಲಿ ₹ 1.62 ಕೋಟಿಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ರೈ ಹೇಳಿದ್ದಾರೆ.
ಚೆನ್ನೈ, ಅಸ್ಸಾಂ, ಭುವನೇಶ್ವರ್, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಂಚಿತ ಹಣವನ್ನು ವರ್ಗಾವಣೆ ಮಾಡಿರುವ ಬ್ಯಾಂಕ್ ಖಾತೆಗಳು ತನಿಖೆಯ ವೇಳೆ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.