ಬೆಂಗಳೂರು ವಿದ್ಯಾರ್ಥಿಗಳಿಂದ ಕಾರ್ಗಿಲ್‌ಗೆ ಸೈಕಲ್‌ ಯಾತ್ರೆ !

-60 ದಿನಗಳ ಯಾತ್ರೆ ನಂತರ ಕಾರ್ಗಿಲ್‌ಗೆ ತಲುಪಿ, ವೀರಯೋಧರಿಗೆ ನಮನ

Team Udayavani, Aug 3, 2023, 7:22 AM IST

JAM CY

ನವದೆಹಲಿ: ಇತ್ತೀಚೆಗೆ ನಡೆದ 24ನೇ ಕಾರ್ಗಿಲ್‌ ವಿಜಯ ದಿವಸದಂದು ದೇಶದ ವಿವಿಧೆಡೆ ಕಾರ್ಗಿಲ್‌ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ಈ ಗೌರವಾರ್ಪಣೆಯನ್ನು ವಿಶಿಷ್ಟಗೊಳಿಸಿದ್ದಾರೆ. ಬೆಂಗಳೂರಿನಿಂದ ಕಾರ್ಗಿಲ್‌ವರೆಗೆ ಬರೋಬ್ಬರಿ 3,200 ಕಿ.ಮೀ.ಗಳ ದೂರವನ್ನು ಸೈಕಲ್‌ ಮೂಲಕ ಕ್ರಮಿಸಿ ಕಾರ್ಗಿಲ್‌ ವೀರ ಕಲಿಗಳಿಗೆ ನಮಿಸಿದ್ದಾರೆ.

ರಾಮಯ್ಯ ಕಾಲೇಜಿನ ಬಿಬಿಎ ವಿದ್ಯಾರ್ಥಿ ಎ.ಕೃಷ್ಣನ್‌ ಹಾಗೂ ಸಂತ ಜೋಸೆಫ್ ಯೂನಿವರ್ಸಿಟಿಯ ಬಿ.ಕಾಮ್‌ ವಿದ್ಯಾರ್ಥಿ ಸಾಯಿ ಕೌಶಿಕ್‌ ಈ ಸೈಕಲ್‌ ಯಾನವನ್ನು ನಡೆಸಿದ್ದಾರೆ. ಮುಂಗಾರು ಹವಾಮಾನದ ನಡುವೆಯೂ ಟೈಫಾಯ್ಡ ಜ್ವರದಿಂದ ತತ್ತರಿಸಿದರೂ 60 ದಿನಗಳ ಸುದೀರ್ಘ‌ ಪಯಣವನ್ನು ಪೂರೈಸಿದ ಈ ಇಬ್ಬರು ಯುವಕರು ಮಾರ್ಗಮಧ್ಯೆ ಕಾರ್ಗಿಲ್‌ ಯೋಧರ ಶೌರ್ಯ, ಸಾಹಸಗಳನ್ನು ತಿಳಿಸುವ ಸಲುವಾಗಿ (ಎನ್‌ಸಿಸಿ) ಘಟಕಗಳಿಗೂ ಭೇಟಿ ನೀಡಿದ್ದಾರೆ.

ಮೇ ತಿಂಗಳಲ್ಲಿ ಶುರು ಮಾಡಿದ ಪ್ರಯಾಣವು ಕನ್ಯಾಕುಮಾರಿ-ಶ್ರೀನಗರ ಹೆದ್ದಾರಿ ಮಾರ್ಗವಾಗಿ ಸಾಗಿದ್ದು, ಮುಂಗಾರು ಆರಂಭಕ್ಕೂ ಮುನ್ನವೇ ಪೂರ್ಣಗೊಳಿಸಬಹುದೆಂದು ಅಂದಾಜಿಸಿದ್ದರು. ಆದರೆ, ಮಾರ್ಗಮಧ್ಯೆಯ ಅಪಘಾತ, ಜ್ವರ, ಪ್ರವಾಹ ಪರಿಸ್ಥಿತಿಗಳಿಂದ ಎದುರಾದ ಸಂಚಾರ ಅಡೆತಡೆ ಎಲ್ಲವನ್ನೂ ಮೀರಿ ಸುದೀರ್ಘ‌ 2 ತಿಂಗಳ ಪಯಣದ ಬಳಿಕ ಜುಲೈ 24ರಂದು ಕಾರ್ಗಿಲ್‌ ಹುತಾತ್ಮರ ಸ್ಮಾರಕ ತಲುಪಿದೆವು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಪ್ರಾಣತ್ಯಾಗ ಮರೆತಿದ್ದೇ ವಿಪರ್ಯಾಸ
ಹೊಸವರ್ಷದಂದು ನಾನೊಂದು ಪುಸಕ್ತ ಓದುತ್ತಿದ್ದೆ, ಅದು ಕ್ಯಾಪ್ಟನ್‌ ವೈಜಯಂತ್‌ ಥಾಪರ್‌ ಅವರ ಬಗ್ಗೆ. ಅವರ ಶೌರ್ಯ, ಸಾಹಸಕ್ಕೆ ಭಾರತ ಸರ್ಕಾರ ವೀರಚಕ್ರವನ್ನೂ ಪ್ರದಾನಿಸಿದೆ. ಇದೇ ರೀತಿ ಶೌರ್ಯಪದಕ ಪಡೆದ 5 ಯೋಧರ ಹೆಸರನ್ನು ಹೇಳುವಿರಾ ಎಂದಾಗ ನನ್ನ ಕುಟುಂಬದ ಯಾರಿಗೂ ಆ ಬಗ್ಗೆ ತಿಳಿದಿರಲಿಲ್ಲ. ನನ್ನ ಸ್ನೇಹಿತರಿಗೂ ಕೂಡ.. ನಮಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ನಾವು ಮರೆತಿರುವುದು ವಿಪರ್ಯಾಸ..ಅದಕ್ಕಾಗಿ ಅಂದು ಬರೀ 1 ಅಥವಾ 2 ದಿನದ ಆಚರಣೆಗೆ ಬಲಿದಾನ ಮೀಸಲಾಗದೇ ಎಲ್ಲರಿಗೂ ಈ ತ್ಯಾಗ ತಿಳಿಯಬೇಕೆಂದು ನಿರ್ಧರಿಸಿದೆ. ಹಾಗಾಗಿ ಈ ಯಾನ ಕೈಗೊಂಡು ಸಾಧ್ಯವಾದಷ್ಟು ಕಾರ್ಗಿಲ್‌ ಯೋಧರ ಬಗ್ಗೆ ಜನರಿಗೆ ತಿಳಿಸಿದ್ದೇವೆ ಎಂದು ಕೃಷ್ಣನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.