Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕರ್ನಾಟಕ ಸೇರಿ ಹಲವು ದಕ್ಷಿಣದ ರಾಜ್ಯಗಳಲ್ಲಿ ಮಳೆ
Team Udayavani, Oct 22, 2024, 7:50 AM IST
ಭುವನೇಶ್ವರ: ಬಂಗಾಲಕೊಲ್ಲಿ ಹಾಗೂ ಅಂಡಮಾನ್ನಲ್ಲಿ ಸೋಮವಾರ ವಾಯು ಭಾರ ಕುಸಿತ ಉಂಟಾಗಿದೆ.
ಅ.23ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಲದ ನಡುವೆ ಹಾದು ಹೋಗಲಿದೆ ಐಎಂಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ಶನಿವಾರದ ವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚು ಕಾಲ ಇರಲಿದೆ. ರಾಜ್ಯದ ಕರಾವಳಿಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಪ್ರತೀ ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ತಂಡಗಳ ನಿಯೋಜನೆ: ಚಂಡಮಾರುತ ಹಿನ್ನೆಲೆಯಲ್ಲಿ ಎನ್ಡಿಆರ್ಎಫ್ನ 25 ತಂಡಗಳನ್ನು ಪಶ್ಚಿಮ ಬಂಗಾಲದಲ್ಲಿ, 11 ತಂಡಗಳನ್ನು ಒಡಿಶಾದಲ್ಲಿ ನಿಯೋಜಿಸ ಲಾಗಿದೆ. ಜತೆಗೆ ಸೇನೆಯ ರಕ್ಷಣ ಹಾಗೂ ಪರಿಹಾರ ತಂಡ, ಕೋಸ್ಟ್ ಗಾರ್ಡ್ ತಂಡಗಳೂ ಸಿದ್ಧತೆ ನಡೆಸಿವೆ.
ಕರ್ನಾಟಕದಲ್ಲಿ ಮಳೆ: ಚಂಡಮಾರುತ ಪ್ರಭಾವದಿಂದಾಗಿ ಕರ್ನಾಟಕದ ಕರಾ ವಳಿ ಹಾಗೂ ಉತ್ತರ ಒಳನಾಡು, ಗುಜ ರಾತ್, ಗೋವಾ, ಮಧ್ಯ ಮಹಾರಾಷ್ಟ್ರ, ಕೇರಳ, ತಮಿಳುನಾಡು, ರಾಯಲ ಸೀಮಾ ಹಾಗೂ ಆಂಧ್ರಪ್ರದೇಶಗಳಲ್ಲಿ ಮಳೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್
Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
UPI Payment: ಮಾಲ್ದೀವ್ಸ್ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!
Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.