Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
Team Udayavani, May 28, 2024, 1:13 AM IST
ಕೋಲ್ಕತಾ/ಢಾಕಾ: ರವಿವಾರ ರಾತ್ರಿ ಬಾಂಗ್ಲಾ ಕರಾವಳಿಗೆ ಅಪ್ಪಳಿಸಿದ ರೆಮಲ್ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ 6 ಮತ್ತು ಬಾಂಗ್ಲಾದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಗಂಟೆಗೆ 135 ಕಿ.ಮೀ. ವೇಗದಲ್ಲಿ ಚಂಡಮಾರುತ ಹಾದು ಹೋಗಿದ್ದು, ಶಿಥಿಲಗೊಂಡಿದ್ದ ಕಟ್ಟಡಗಳು, ನೂರಾರು ಮರಗಳು ಧರೆಗುರುಳಿವೆ.
ಬಾಂಗ್ಲಾ ಮತ್ತು ಪ.ಬಂಗಾಲ ಕರಾವಳಿ ಯುದ್ದಕ್ಕೂ ಅಪಾರ ಪ್ರಮಾಣದ ಹಾನಿಯಾಗಿದೆ. ಅನೇಕ ಮನೆಗಳ ಛಾವಣಿಗಳು ಹಾರಿಹೋಗಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ಬಾಂಗ್ಲಾದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡು, 1.50 ಕೋಟಿ ಮಂದಿ ಕಗ್ಗತ್ತಲಲ್ಲೇ ರಾತ್ರಿ ಕಳೆದಿದ್ದಾರೆ.
ಪ.ಬಂಗಾಲದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿತ್ತು. ಮೆಟ್ರೋ, ರೈಲು, ವಿಮಾನ ಸೇವೆಗಳು ವ್ಯತ್ಯಯ ವಾಗಿವೆ. ಕೋಲ್ಕತಾ ಏರ್ಪೋರ್ಟ್ನಲ್ಲಿ 21 ಗಂಟೆಗಳ ಕಾಲ ವಿಮಾನಗಳ ಸಂಚಾರ ಸ್ಥಗಿತ ಗೊಂಡಿದ್ದವು. ಕೋಲ್ಕತಾದಲ್ಲಿ ರವಿವಾರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 5.30ರ ವರೆಗೆ 146 ಮಿ.ಮೀ. ಮಳೆಯಾಗಿದೆ. ಸೋಮವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವು ತೀವ್ರತೆ ಕಳೆದುಕೊಂಡಿದ್ದು, ಕ್ರಮೇಣ ದುರ್ಬಲ ವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೈಕ್ಲೋನ್ ಭೀಕರತೆ ವೀಡಿಯೋದಲ್ಲಿ ಸೆರೆ!: ಬಾಂಗ್ಲಾ ದಿನಪತ್ರಿಕೆ “ದಿ ಡೈಲಿ ಸ್ಟಾರ್’ನ ವೀಡಿಯೋಗ್ರಾಫರ್ವೊಬ್ಬರು ಚಂಡಮಾರುತದ ಭೀತಿಯ ನಡುವೆಯೇ ಏಕಾಂಗಿಯಾಗಿ ಬೋಟ್ನಲ್ಲಿ ಸಾಗಿ ರೆಮಲ್ ರೌದ್ರಾವತಾರ ತಾಳುತ್ತಿರುವುದನ್ನು ತಮ್ಮ ಕೆಮರಾದಲ್ಲಿ ಸೆರೆಹಿಡಿದಿದ್ದು, ವೀಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.