SC, ST ಒಳಮೀಸಲು; ಇಂದು ಭಾರತ್ ಬಂದ್: ಹಲವು ಸಂಘಟನೆಗಳ ಬೆಂಬಲ
Team Udayavani, Aug 21, 2024, 7:40 AM IST
ಹೊಸದಿಲ್ಲಿ: ಎಸ್ಸಿ, ಎಸ್ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರಕಾರಗಳಿಗಿವೆ ಎಂಬ ಸುಪ್ರೀಂ ಕೋರ್ಟ್ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಬುಧವಾರ ನಡೆಯಲಿದೆ.
ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿರುವ ಕಾರಣ ಭದ್ರತೆ ಹೆಚ್ಚಿಸಲಾಗಿದೆ. ಉದ್ಯಮ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ.
ಹಲವು ರಾಜ್ಯಗಳ ಹಲವಾರು ಎಸ್ಸಿ/ಎಸ್ಟಿ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಮೆಡಿಕಲ್, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್ಗಳು, ಶಾಲಾ ಕಾಲೇಜು, ಎಲ್ಲಾ ಬ್ಯಾಂಕ್ಗಳು, ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.
ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್ ಕಾವು ಇರಲಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.