![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 19, 2021, 1:21 PM IST
ಉತ್ತರ ಪ್ರದೇಶ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿರ್ದೇಶನದಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ ಆರ್ ಡಿ ಒ) ಸೋಮವಾರ (ಏಪ್ರಿಲ್ 19) ಉತ್ತರ ಪ್ರದೇಶಕ್ಕೆ 150 ಜಂಬೋ ಸಿಲಿಂಡರ್ ಆಕ್ಸಿಜನ್ ಪೂರೈಸಿದೆ.
ಹೆಚ್ಚುವರಿ 1,000 ಸಿಲಿಂಡರ್ ಗಳನ್ನು ನಂತರ ಡಿ ಆರ್ ಡಿ ಒ ಒದಗಿಸಲಿದ್ದು, ಕೋವಿಡ್ ಸೋಂಕಿತರಿಗೆ ಲಕ್ನೋದಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸಲಾಗುತ್ತದೆ.
ಓದಿ : ಗುತ್ತಿಗಾರು ಪ್ರೌಢಶಾಲೆಯ ಮೂವರು ಮಕ್ಕಳಿಗೆ ಕೋವಿಡ್: ಪರೀಕ್ಷೆ ರದ್ದುಗೊಳಿಸಿ ರಜೆ ಘೋಷಣೆ
ಇನ್ನು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಬುಧವಾರ (ಏಪ್ರಿಲ್ 14) ಕೋವಿಡ್ ಸೋಂಕು ದೃಢಪಟ್ಟಿದ್ದು, ಉತ್ತರ ಪ್ರದೇಶದ ಕೋವಿಡ್ -19 ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ಶುಕ್ರವಾರ ಉತ್ತರ ಪ್ರದೇಶ ಸರ್ಕಾರ ಮೇ 15 ರ ತನಕ ವಾರಾಂತ್ಯ ಲಾಕ್ ಡೌನ್ ಅನ್ನು ಹೇರಿ, ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಉತ್ತರ ಪ್ರದೇಶದಲ್ಲಿ ಪ್ರಸ್ತುತ ಒಟ್ಟು 1,91,457 ಸಕ್ರಿಯ ಕೋವಿಡ್ -19 ಪ್ರಕರಣಗಳಿದ್ದು, ಒಟ್ಟು 6,50,333 ಸೋಂಕಿನ ಪ್ರಕರಣಗಳು ದಾಖಲುಗೊಂಡಿವೆ ಮತ್ತು 9,830 ಸಾವುಗಳು ಸಂಭವಿಸಿವೆ.
ಇನ್ನು, ಕಳೆದ 24 ಗಂಟೆಗಳಲ್ಲಿ 2.73 ಲಕ್ಷಕ್ಕೂ ಹೆಚ್ಚು ಹೊಸ ಸೋಂಕುಗಳು ಮತ್ತು 1,619 ಸಾವುಗಳು ದೇಶದಲ್ಲಿ ದಾಖಲಾಗಿವೆ.
ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 1,50,61,919 ಕ್ಕೆ ಏರಿಕೆಯಾಗಿದ್ದು. ಪ್ರಸ್ತುತ 19,29,329 ಸಕ್ರಿಯ ಪ್ರಕರಣಗಳಿವೆ.
ಓದಿ : ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ: ದೇವರ ದೊಡ್ಡ ದರ್ಶನ ಬಲಿ ಉತ್ಸವ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.