ಕೇಜ್ರಿವಾಲ್ ಅಧಿಕೃತ ನಿವಾಸದ ನವೀಕರಣ; ಸಮರಕ್ಕಿಳಿದ BJP-AAP
ಆಪ್ ನಿಂದ ಶುಕ್ರವಾರ ಬೃಹತ್ ಪ್ರತಿಭಟನೆ
Team Udayavani, Apr 27, 2023, 10:18 PM IST
ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ನವೀಕರಣದ ಕುರಿತು ಬಿಜೆಪಿ ಮತ್ತು ಎಎಪಿ ಜಟಾಪಟಿ ಮುಂದುವರೆಸಿದ್ದು, ಕೇಸರಿ ಪಕ್ಷದ ನಾಯಕರು “ರಾಜಭವನದ ಬಂಗಲೆ” ಗಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿ ಬಂಗಲೆಯ ಪ್ರತಿಕೃತಿಯೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಈ ವಿಚಾರವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಟ್ವಿಟರ್ ನಲ್ಲಿ ವಿಡಿಯೋ ಮೂಲಕ “ಬಿಜೆಪಿಗೆ ದೆಹಲಿ ಸಾರ್ವಜನಿಕರ ಉತ್ತರ ಎಂದು ಜನಾಭಿಪ್ರಾಯ ಹಂಚಿಕೊಂಡಿದ್ದಾರೆ.
”ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡುತ್ತಿರುವ ದೇಶದ ಆಡಳಿತಗಾರರ ವಿರುದ್ಧ ಆಪ್ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ನಿವಾಸದ ಬಳಿ ದೆಹಲಿ ಬಿಜೆಪಿ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿರೋಧ ಪಕ್ಷದ ನಾಯಕ ರಾಮ್ವೀರ್ ಸಿಂಗ್ ಬಿಧುರಿ, “ದೆಹಲಿಯನ್ನು ಲೂಟಿ ಮಾಡಿದ ಮಹಮ್ಮದ್ ಘಜ್ನವಿ ಮತ್ತು ಮುಹಮ್ಮದ್ ಘೋರಿಯ ಭವಿಷ್ಯವು ದೆಹಲಿಯ ಜನರ ಕೈಯಲ್ಲಿ ಕೇಜ್ರಿವಾಲ್ಗೆ ಒಂದು ದಿನ ಕಾಯುತ್ತಿದೆ” ಎಂದು ಹೇಳಿದರು. ಸಿವಿಲ್ ಲೈನ್ಸ್ ಏರಿಯಾದ 6, ಫ್ಲಾಗ್ಸ್ಟಾಫ್ ರಸ್ತೆಯಲ್ಲಿರುವ ಮುಖ್ಯಮಂತ್ರಿಯವರ ನಿವಾಸದ ನವೀಕರಣಕ್ಕಾಗಿ 45 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು, ಆಪ್ ಮತ್ತು ಕೇಜ್ರಿವಾಲ್ ವಿರುದ್ಧ ಬಿಜೆಪಿ ಸಮರ ಸಾರಿದೆ.
ಬಿಜೆಪಿ ಪ್ರತಿಭಟನಾಕಾರರು ಚಂದಗಿ ರಾಮ್ ಅಖಾರಾದಿಂದ ಮೆರವಣಿಗೆಯನ್ನು ಪ್ರಾರಂಭಿಸಿದರು, ಅಲ್ಲಿ ಮುಖ್ಯಮಂತ್ರಿಯ ನವೀಕರಿಸಿದ ಬಂಗಲೆ ಪ್ರತಿಕೃತಿ ಸಂಕೇತವಾಗಿ ಇರಿಸಿ ಅದರ ಮುಂದೆ ಕೇಜ್ರಿವಾಲ್ ಅವರ ಮುಖವಾಡವನ್ನು ಧರಿಸಿ ಪಕ್ಷದ ಕಾರ್ಯಕರ್ತನನ್ನು ಕೂರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MUST WATCH
ಹೊಸ ಸೇರ್ಪಡೆ
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.