Delhi High Court: ಕೇಜ್ರಿವಾಲ್‌ ಅರೆಸ್ಟ್‌ ಕೇಸ್‌, ತೀರ್ಪು ಕಾಯ್ದಿಟ್ಟ ದಿಲ್ಲಿ ಹೈಕೋರ್ಟ್‌

ಚುನಾವಣೆ ಸಂದರ್ಭದಲ್ಲಿ ಬಂಧಿಸಿದ್ದೇಕೆ: ಕೇಜ್ರಿವಾಲ್‌ ಪರ ವಕೀಲ

Team Udayavani, Apr 3, 2024, 9:13 PM IST

Delhi High Court: ಕೇಜ್ರಿವಾಲ್‌ ಅರೆಸ್ಟ್‌ ಕೇಸ್‌, ತೀರ್ಪು ಕಾಯ್ದಿಟ್ಟ ದಿಲ್ಲಿ ಹೈಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ತನ್ನ ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿದೆ. ಈ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಕೇಜ್ರಿವಾಲ್‌ ಪರ ಮತ್ತು ಇ.ಡಿ. ಪರ ವಕೀಲರ ನಡುವೆ ಬಿರುಸಿನ ವಾದ ನಡೆಯಿತು.

ವಾದ-ಪ್ರತಿವಾದ ಆಲಿಸಿದ ಬಳಿಕ ದೆಹಲಿ ಹೈಕೋರ್ಟ್‌ನ ನ್ಯಾ. ಸ್ವರಣಾ ಕಾಂತ್‌ ಶರ್ಮಾ ಅವರು, “ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸುತ್ತಿದ್ದೇನೆ” ಎಂದು ಪ್ರಕಟಿಸಿದರು. ಕೇಜ್ರಿವಾಲ್‌ ಪರ ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂಘ್ವಿ ಮತ್ತು ಇ.ಡಿ. ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌(ಎಎಸ್‌ಜಿ) ಎಸ್‌.ವಿ.ರಾಜು ಹಾಜರಾಗಿದ್ದರು.

ಬಂಧನದ “ಸಂದರ್ಭ’ವನ್ನು ಪ್ರಶ್ನಿಸಿದ ಆಪ್‌ ನಾಯಕನ ಪರ ವಕೀಲರು, ಇದು ಸಂವಿಧಾನ ಮೂಲ ಸಂರಚನೆ ಹಾಗೂ ನ್ಯಾಯ ಮತ್ತು ಮುಕ್ತ ಚುನಾವಣೆಯ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಎಎಸ್‌ಜಿ ಎಸ್‌.ವಿ.ರಾಜು, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೇಜ್ರಿವಾಲ್‌ ವಿರುದ್ಧ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ತಿಳಿಸಿದರು. ಅಲ್ಲದೆ, ಕೇಜ್ರಿವಾಲ್‌ ಬಂಧನಕ್ಕೆ ಸಾಕ್ಷ್ಯಗಳಿಗೆ ಹೇಳಿಕೆಗಳನ್ನು ಆಧಾರವಾಗಿಟ್ಟುಕೊಳ್ಳಲಾಗಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಎಎಸ್‌ಜಿ, ಕ್ರಿಮಿನಲ್‌ಗ‌ಳ ಬಂಧನವಾಗಬೇಕು ಮತ್ತು ಅವರನ್ನು ಸೆರೆಮನೆಯಲ್ಲಿ ಇಡಬೇಕು ಎಂದು ಖಾರವಾಗಿ ಹೇಳಿದರು. ಅರವಿಂದ್‌ ಕೇಜ್ರಿವಾಲರನ್ನು ಇ.ಡಿ ಮಾರ್ಚ್‌ 21ರಂದು ಬಂಧಿಸಿತ್ತು ಮತ್ತು ಅವರೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕೇಜ್ರಿವಾಲ್‌ ಪರ ವಾದ :
– ಕೇಜ್ರಿವಾಲ್‌ ವಿರುದ್ಧ ಇ.ಡಿ. ಬಳಿ ಸಾಕ್ಷ್ಯಗಳಿಲ್ಲ. ಅವರ ಹೇಳಿಕೆ ಪಡೆದಿಲ್ಲ.
– ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲರನ್ನು ಬಂಧಿಸಿದ್ದೇಕೆ? ಮುಕ್ತ ಮತ್ತು ನ್ಯಾಯಸಮ್ಮತ ಎಲೆಕ್ಷನ್‌ಗೆ ಸಮಾನವ ಅವಕಾಶ ಅಗತ್ಯ.
-ಕೇಜ್ರಿವಾಲ್‌ ಓಡಿ ಹೋಗುವ ಸಾಧ್ಯತೆ ಇತ್ತಾ? ಒಂದೂವರೆ ವರ್ಷದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ್ರಾ?
– ಆರೋಪಿತರು ಹೇಳಿಕೆಗಳ ಬದಲಿಸಿದ ನಂತರ ಬಂಧಿಸಲಾಗಿದೆ. ಬಳಿಕ ಅವರಿಗೆ ಜಾಮೀನು ನೀಡಲಾಗಿದೆ.
-ಮಗುಂತಾ ರೆಡ್ಡಿಯ 13 ಹೇಳಿಕೆಗಳ ಪೈಕಿ 11 ಹೇಳಿಕೆಗಳಲ್ಲಿ ಕೇಜ್ರಿವಾಲ್‌ ಉಲ್ಲೇಖವಿಲ್ಲ.

ಇ.ಡಿ.ಯ ಪ್ರತಿವಾದ:
– ಚುನಾವಣೆ ಮುಂಚೆ ರಾಜಕೀಯ ವ್ಯಕ್ತಿ ಅಪರಾಧ ಮಾಡಿದರೆ, ಆತನನ್ನು ಬಂಧಿಸಬಾರದೆ?
– ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಹಣ ಕೈ ಬದಲಾದ ಬಗ್ಗೆ ಸಾಕ್ಷ್ಯಗಳಿವೆ.
– ಸಾಕ್ಷ್ಯಗಳನ್ನು ಮುಂದಿಟ್ಟಾಗ ಆರೋಪಿತರ ತಮ್ಮ ಹೇಳಿಕೆಗಳನ್ನು ಬದಲಿಸುತ್ತಾರೆ. ಈ ಪ್ರಕರಣದಲ್ಲೂ ಹಾಗೆ ಆಗಿರುವುದು.
– ಅಕ್ರಮ ಹಣ ವರ್ಗಾವಣೆ ಬಗ್ಗೆ ನಮ್ಮ ಬಳಿ ವಾಟ್ಸಾಪ್‌ ಚಾಟ್‌, ಹೇಳಿಕೆಗಳಿವೆ. ಸಾಕಷ್ಟು ಮಾಹಿತಿ ಇದೆ.
– ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಸ್ವತಃ ಭಾಗಿಯಾಗಿದ್ದಾರೆ.

ಟಾಪ್ ನ್ಯೂಸ್

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.