Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
ಭರತ ರಾಮನ ಪಾದುಕೆ ಇಟ್ಟಂತೆ ನಾನು ಆಳ್ವಿಕೆ ಮಾಡುತ್ತೇನೆ ಎಂದ ಆತಿಶಿ
Team Udayavani, Sep 23, 2024, 2:25 PM IST
ಹೊಸದಿಲ್ಲಿ: ಎಎಪಿ ನಾಯಕಿ ಅತಿಶಿ (Atishi) ಸೋಮವಾರ ದೆಹಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಸಿಎಂ ಕಚೇರಿಯಲ್ಲಿ ಅವರ ಕುರ್ಚಿಯ ಪಕ್ಕದಲ್ಲಿ ಖಾಲಿ ಕುರ್ಚಿ ಇರಿಸಿ ನಿಕಟಪೂರ್ವ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ನಿಷ್ಠೆ ತೋರಿಸಿದ್ದಾರೆ.
43 ವರ್ಷದ, ದೆಹಲಿಯ ಕಿರಿಯ ಮುಖ್ಯಮಂತ್ರಿ ಆತಿಶಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತನ್ನನ್ನು ರಾಮಾಯಣ ಮಹಾಕಾವ್ಯದ ಭರತನಿಗೆ ಹೋಲಿಸಿಕೊಂಡರು. ಶ್ರೀರಾಮನ ಅನುಪಸ್ಥಿತಿಯಲ್ಲಿ ಭರತ ಸಿಂಹಾಸನದ ಮೇಲೆ ರಾಮನ ಪಾದುಕೆಯಟ್ಟು ಆಳ್ವಿಕೆ ನಡೆಸಿದ್ದರು.
“ಇಂದು, ನಾನು ಭರತ ಹೊತ್ತ ಅದೇ ಹೊರೆಯನ್ನು ಹೊತ್ತಿದ್ದೇನೆ. ಅವರು ಸಿಂಹಾಸನದ ಮೇಲೆ ಶ್ರೀರಾಮನ ಪಾದುಕೆಯನ್ನಿಟ್ಟು ಆಳ್ವಿಕೆ ಮಾಡಿದಂತೆಯೇ, ಮುಂದಿನ ನಾಲ್ಕು ತಿಂಗಳ ಕಾಲ ನಾನು ಅದೇ ಉತ್ಸಾಹದಿಂದ ದೆಹಲಿಯನ್ನು ಆಳುತ್ತೇನೆ” ಎಂದು ಅತಿಶಿ ಹೇಳಿದರು.
Taking charge as the Chief Minister of Delhi. LIVE https://t.co/AvLpC8u1f6
— Atishi (@AtishiAAP) September 23, 2024
ಮುಂಬರುವ ಚುನಾವಣೆಯಲ್ಲಿ ದೆಹಲಿಯ ಜನರು ಅರವಿಂದ್ ಕೇಜ್ರಿವಾಲ್ ಅವರನ್ನು ಶೀಘ್ರದಲ್ಲೇ ಅಧಿಕಾರಕ್ಕೆ ತರಲಿದ್ದಾರೆ ಎಂದು ಅತಿಶಿ ಹೇಳಿದ್ದಾರೆ.
“ಈ ಕುರ್ಚಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ, ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ, ಅವರು ಹಿಂದಿರುಗುವವರೆಗೆ ಕಾಯುತ್ತದೆ” ಎಂದು ದೆಹಲಿ ನೂತನ ಸಿಎಂ ಹೇಳಿದರು.
ಅತಿಶಿ ಅವರು ಕೇಜ್ರಿವಾಲ್ ಸರ್ಕಾರದಲ್ಲಿ ಶಿಕ್ಷಣ, ಆದಾಯ, ಹಣಕಾಸು, ವಿದ್ಯುತ್ ಮತ್ತು ಪಿಡ್ಲ್ಯೂಡಿ ಸೇರಿದಂತೆ 13 ಖಾತೆಗಳನ್ನು ಉಳಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!
Marriage;ನವೆಂಬರ್-ಡಿಸೆಂಬರ್ನಲ್ಲಿ ದೇಶದಲ್ಲಿ 35 ಲಕ್ಷ ಮದುವೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
America: 1951ರಲ್ಲಿ ಕಿಡ್ನಾಪ್ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!
Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.