Delhi CM ಕೇಜ್ರಿಗೆ ಕ್ಯಾನ್ಸರ್? ಜಾಮೀನು ವಿಸ್ತರಣೆಗೆ ಸುಪ್ರೀಂಗೆ ಮೇಲ್ಮನವಿ
Team Udayavani, May 28, 2024, 6:30 AM IST
ಹೊಸದಿಲ್ಲಿ: ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಾಂತರ ಜಾಮೀನು ಪಡೆದಿರುವ ಸಿಎಂ ಕೇಜ್ರಿವಾಲ್, ಅನಾರೋಗ್ಯದ ಹಿನ್ನೆಲೆ ಜಾಮೀನು ಅವಧಿಯನ್ನು 7 ದಿನ ಗಳವರೆಗೆ ವಿಸ್ತರಣೆ ಕೋರಿ ಸುಪ್ರೀಂಗೆ ಮೇಲ್ಮ ನವಿ ಸಲ್ಲಿಸಿ ದ್ದಾರೆ. ಅವರ ಜಾಮೀನು ಅವಧಿ ಜೂ.1ಕ್ಕೆ ಮುಕ್ತಾಯವಾಗಲಿದೆ. ಈ ಮಧ್ಯೆ ಕೇಜ್ರಿವಾಲ್ಗೆ ಕ್ಯಾನ್ಸರ್ ಇರುವ ಸಾಧ್ಯತೆಯಿದೆ ಎಂದು ಆಪ್ ನಾಯಕಿ, ಸಚಿವೆ ಆತಿಶಿ ಹೇಳಿದ್ದಾರೆ. ಕೇಜ್ರಿವಾಲರ ಆರಂಭಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರಲ್ಲಿ ಕೀಟೋನ್ ಪ್ರಮಾಣ ಹೆಚ್ಚಾಗಿದೆ. ದಿಢೀರ್ ತೂಕ ಇಳಿಕೆ ಮತ್ತು ಕೀಟೋನ್ ಪ್ರಮಾಣ ಹೆಚ್ಚಳವು ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳ ಸೂಚಕ ಎಂದು ಆತಿಶಿ ಹೇಳಿದ್ದಾರೆ.
ಈ ಹಿನ್ನೆಲೆ ಕೇಜ್ರಿವಾಲ್ ಜಾಮೀನು ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ್ದು, ರಜಾಕಾಲ ಪೀಠವು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕಠಿನ ನಿಯಮಗಳಿಂದಾಗಿ ಕೇಜ್ರಿವಾಲ್ ಅನಾರೋಗ್ಯ ಹೆಚ್ಚಾಗಿದೆ ಎನ್ನಲಾಗಿದೆ. ಜೈಲಿನಲ್ಲಿದ್ದಾಗ ಕೇಜ್ರಿವಾಲ್ ಸುಮಾರು 6ರಿಂದ 7 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಬಿಡುಗಡೆ ಬಳಿಕ ಎಂದಿನ ಜೀವನಶೈಲಿಯ ಹೊರತಾಗಿಯೂ ತೂಕದಲ್ಲಿ ಏರಿಕೆಯಾಗಿಲ್ಲ.
ಮೂತ್ರದಲ್ಲಿ ಕೀಟೋನ್ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಅಸಾಮಾನ್ಯ ರಕ್ತದೊತ್ತಡ ಗ್ಲುಕೋಸ್ ಕೂಡ ಹೆಚ್ಚಾಗಿದೆ. ಇದರಿಂದ ಮಧುಮೇಹ ಅಧಿಕವಾಗಿದೆ ಎಂದು ವೈದ್ಯಕೀಯ ಪರೀಕ್ಷೆಗಳಲ್ಲಿ ಗೊತ್ತಾಗಿದೆ. ಅಲ್ಲದೇ ಕಿಡ್ನಿಗೆ ಹಾನಿಯಾಗಿರುವ ಸಾಧ್ಯತೆಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮೇ 25ರಂದು ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ಕೇಜ್ರಿವಾಲರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಪಿಇಟಿ-ಸಿಟಿ ಒಳಗೊಂಡಂತೆ ಹಲವು ಪರೀಕ್ಷೆಗಳಿಗೆ ನಿರ್ದೇಶಿಸಿದ್ದಾರೆ. ಹೃದಯದ ಚಟುವಟಿಕೆ ಗಮನಿಸಲು ಹೋಲ್ಟರ್ ಮಾನಿಟರ್ ಧರಿಸಬೇಕಾಗಿದೆ. ಇದಕ್ಕಾಗಿ ಜಾಮೀನು ವಿಸ್ತರಣೆ ಮಾಡುವಂತೆ ಮೇಲ್ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.