Delhi excise scam: 5 ತಿಂಗಳ ಬಳಿಕ ಕೆಸಿಆರ್‌ ಪುತ್ರಿಗೆ ಜಾಮೀನು


Team Udayavani, Aug 27, 2024, 11:29 PM IST

Delhi excise scam: KCR’s daughter gets bail after 5 months

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್‌ ಪುತ್ರಿ  ಕೆ.ಕವಿತಾಗೆ ಸುಪ್ರೀಂ ಕೋರ್ಟ್‌ ಮಂಗಳ ವಾರ ಜಾಮೀನು ನೀಡಿದೆ. ಈ ಮೂಲಕ ಈ ಪ್ರಕರಣ ದಲ್ಲಿ ಮನೀಶ್‌ ಸಿಸೋಡಿಯಾ ಅವರ ಬಳಿಕ ಮತ್ತೂಬ್ಬ ಪ್ರಭಾವಿ ನಾಯಕರಿಗೆ ಜಾಮೀನು ಸಿಕ್ಕಂತಾಗಿದೆ.

5 ತಿಂಗಳಿನಿಂದ ಕವಿತಾ ಕಸ್ಟಡಿಯಲ್ಲಿರುವುದನ್ನು ಗಮನಿಸಿದ ನ್ಯಾ|ಬಿ.ಆರ್‌.ಗವಾಯಿ ಮತ್ತು ನ್ಯಾ|ಕೆ.ವಿ.ವಿಶ್ವನಾಥ್‌ ಅವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತನಿಖೆ ಮುಕ್ತಾಯಗೊಂಡಿದ್ದು, ಇನ್ನೂ ಕವಿತಾ ಅವರು ಕಸ್ಟಡಿಯಲ್ಲಿರುವ ಆವಶ್ಯಕತೆ ಇಲ್ಲ ಎಂದು ಹೇಳಿ ಜಾಮೀನು ನೀಡಿದೆ.  ಈ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ತನಿಖೆ ನಡೆಯುವ ಸಂಭವಗಳು ಕಡಿಮೆ ಎಂಬುದನ್ನು ಕೋರ್ಟ್‌ ಮನಗಂಡಿದೆ ಎಂದು ಹೇಳಿದೆ. ಈ ಮೂಲಕ ಕವಿತಾಗೆ ಜಾಮೀನು ನಿರಾಕರಿಸಿದ್ದ ದಿಲ್ಲಿ ಹೈಕೋರ್ಟ್‌ ಆದೇಶ ತಳ್ಳಿÖಾಕಿದೆ. ಕವಿತಾ ಈ ಪ್ರಕರಣ ದಲ್ಲಿ ಪ್ರಮುಖ ಆರೋಪಿ ಎಂದು ಹೇಳುವ ಮೂಲಕ ಜು.1ರಂದು ಜಾಮೀನು ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿತ್ತು. ಮಾ.23ರಂದು ಜಾರಿ ನಿರ್ದೇಶನಾಲಯ ಮತ್ತು ಎ.11ರಂದು ಸಿಬಿಐ ಅವರನ್ನು ಬಂಧಿಸಿತ್ತು.

20 ಲಕ್ಷ ರೂ. ಬಾಂಡ್‌: ಕವಿತಾ ವಿರುದ್ಧದ 2 ಪ್ರಕರಣ ಗಳಲ್ಲಿ ತಲಾ 10 ಲಕ್ಷ ರೂ. ಬಾಂಡ್‌ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ವಿಚಾರಣ ನ್ಯಾಯಾಲ ಯದ ವಶಕ್ಕೆ ಪಾಸ್‌ಪೋರ್ಟ್‌ ನೀಡಬೇಕು. ಹೊರ ಹೋದ ಬಳಿಕ ಸಾಕ್ಷಿಗಳನ್ನು ಹೆದರಿಸುವ ಅಥವಾ ಹಾಳು ಮಾಡುವ ಕೆಲಸ ಮಾಡಬಾರದು ಎಂದು ಎಚ್ಚರಿಸಿದೆ.

ಏನಿದು ಪ್ರಕರಣ?: ಕೆಲವರಿಗೆ  ಲಾಭ ಮಾಡಿಕೊಡು ವುದಕ್ಕಾಗಿ ಅಬಕಾರಿ ನೀತಿಯನ್ನು ರೂಪಿಸಲಾಗಿತ್ತು. ಇದರಲ್ಲಿ ಲಂಚ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಮನೀಷ್‌ ಸಿಸೋಡಿಯಾ, ಕೇಜ್ರಿವಾಲ್‌, ಕವಿತಾ ಅವರ ಹೆಸರು ಕೇಳಿಬಂದಿತ್ತು. ಕವಿತಾ ಪ್ರಮುಖ ಆರೋಪಿ ಎಂದು ಹೇಳಿದ್ದ ಇ.ಡಿ ಅವರನ್ನು ಬಂಧಿಸಿತ್ತು. ಬಂಧನದಲ್ಲಿರುವ ಸಮಯದಲ್ಲೇ ಸಿಬಿಐ ಅವರನ್ನು ಬಂಧಿಸಿತ್ತು.

ಕೇಜ್ರಿ ನ್ಯಾಯಾಂಗ ಬಂಧನ ಅವಧಿ ಸೆ.3ರ ವರೆಗೆ ವಿಸ್ತರಣೆ

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ನ್ಯಾಯಾಂಗ ಬಂಧನವನ್ನು ದಿಲ್ಲಿ ಕೋರ್ಟ್‌ ಸೆ.3ರ ವರೆಗೆ ವಿಸ್ತರಿಸಿದೆ. ಹಿಂದೆ ನೀಡಿದ್ದ ಅವಧಿ ಅಂತ್ಯಗೊಂಡದ್ದರಿಂದ ವೀಡಿಯೋ ಕಾನ್ಫರೆನ್ಸ್‌ ವಿಚಾರಣೆ ನಡೆಸಿ,  ಅವಧಿಯನ್ನು ವಿಸ್ತರಿಸಿತು.

ಎಲ್ಲಿದೆ ನ್ಯಾಯಸಮ್ಮತತೆ? ಇ.ಡಿ. ಸಿಬಿಐಗೆ ಸುಪ್ರೀಂ

ಕೆ. ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗಳ “ನ್ಯಾಯಸಮ್ಮತತೆ’ಯನ್ನು ಪ್ರಶ್ನಿಸಿದೆ. ಇದು ಮುಂಬರುವ ಹಲವು ಪ್ರಕರಣಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ. ಕೇವಲ ಪ್ರಾಸಿಕ್ಯೂಶನ್‌ ಸಾಕ್ಷಿಗಳನ್ನಿಟ್ಟು ಕೊಂಡು ಆರೋಪಿಗಳ ಅಪರಾಧವನ್ನು ಖಚಿತ ಪಡಿಸಲು ಸಾಧ್ಯವಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ನೀಡಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.