Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Team Udayavani, Sep 28, 2024, 9:23 AM IST
ನವದೆಹಲಿ: ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಘೋರ ದುರಂತವೊಂದು ನಡೆದಿದೆ, ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ತಂದೆ ಹಾಗೂ ನಾಲ್ವರು ಹೆಣ್ಣು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆಯೊಂದು ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
ದೆಹಲಿಯ ರಂಗಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು ತಂದೆ ಹೀರಾ ಲಾಲ್ (೫೦) ಮತ್ತು ಅವರ ಪುತ್ರಿಯರಾದ ನೀತು (18), ನಿಶಿ (15), ನೀರು (10), ಮತ್ತು ನಿಧಿ (8) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ ಕಾರ್ಪೆಂಟರ್ ವೃತ್ತಿ ಮಾಡುತ್ತಿರುವ ಹೀರಾ ಲಾಲ್ ಅವರ ಹೆಂಡತಿ ಕಳೆದ ಒಂದು ವರ್ಷದ ಹಿಂದೆ ಮರಣಹೊಂದಿದ್ದರು ಇದಾದ ಬಳಿಕ ತನ್ನ ನಾಲ್ವರು ಹೆಣ್ಣುಮಕ್ಕಳೊಂದಿಗೆ ಒಂಟಿಯಾಗಿ ವಾಸಿಸುತ್ತಿದ್ದರು. ನಾಲ್ವರೂ ಹೆಣ್ಣುಮಕ್ಕಳೂ ಅಂಗವೈಕಲ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ ಅದರಲ್ಲೂ ನೀತುಗೆ ದೃಷ್ಟಿದೋಷ, ನಿಶಿಗೆ ನಡೆಯಲು ತೊಂದರೆ ಎಂದು ಹೇಳಲಾಗಿದೆ.
ಸೆಪ್ಟಂಬರ್ 24 ರಂದು ಹೀರಾ ಲಾಲ್ ಮನೆಗೆ ಪ್ರವೇಶಿಸಿದ್ದನ್ನು ಕೊನೆಯದಾಗಿ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಅದರ ನಂತರ, ಯಾರೂ ಒಳಗೆ ಪ್ರವೇಶಿಸುವುದು ಅಥವಾ ಹೊರಹೋಗುವುದು ಕಂಡುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಮನೆಯವರು ನೀಡಿದ ದೂರಿನ ಪ್ರಕಾರ ಸ್ಥಳಕ್ಕಾಗಮಿಸಿದ ಪೊಲೀಸರು ತಪಾಸಣೆ ನಡೆಸಿದ ವೇಳೆ ಮನೆಯ ಒಳಭಾಗದಿಂದ ಚಿಲಕ ಹಾಕಿರುವುದು ಕಂಡು ಬಂದಿದ್ದು ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ನಾಲ್ವರು ಪುತ್ರಿಯರ ಜೊತೆ ತಂದೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
Delhi | 5 of a family, a man and his four daughters commit suicide by consuming a poisonous substance in Vasant Kunj’s Rangpuri Village. Police broke the lock of the flat and took out the bodies after receiving information from neighbours at 10:18 am on Friday: Delhi Police
— ANI (@ANI) September 28, 2024
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದಾರೆ, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದಿದ್ದು ತನಿಖೆಯಿಂದ ಸತ್ಯಂಶ ಹೊರಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
India;ಏಷ್ಯಾ-ಪೆಸಿಫಿಕ್ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.