Kejriwal ನಿವಾಸದ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ: ಎಫ್ ಐಆರ್ ದಾಖಲಿಸಿದ ಪೊಲೀಸರು
Team Udayavani, Sep 14, 2024, 5:13 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕಾಗಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಸ್ವಾಗತಿಸಲು ಉತ್ತರ ದೆಹಲಿಯ ಸಿವಿಲ್ ಲೈನ್ಸ್ನಲ್ಲಿರುವ ನಿವಾಸದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಹೊರ ಹಾಕಿದ್ದರು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಸಾರ್ವಜನಿಕ ಸೇವಕರ ಹೊರಡಿಸಿದ ಆದೇಶಗಳಿಗೆ ಅವಿಧೇಯತೆ) ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಖ್ಯಮಂತ್ರಿ ಅಧಿಕೃತ ನಿವಾಸದ ಹೊರಗೆ ಪಟಾಕಿ ಸಿಡಿಸಿದ ಪ್ರಕರಣವನ್ನು ದಾಖಲಿಸಲಾಗಿದೆ.
ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ದೆಹಲಿ ಸರಕಾರ ನಿಷೇಧಿಸಿದೆ.
ಬಿಜೆಪಿ ಆಕ್ರೋಶ
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು ಪ್ರತಿಕ್ರಿಯಿಸಿ “ದೀಪಾವಳಿ ಅಥವಾ ಹಿಂದೂ ಧರ್ಮದ ಯಾವುದೇ ಹಬ್ಬ ಬಂದಾಗ ಎಎಪಿ ನಾಯಕರು ಘೋಷಣೆ ಮಾಡುತ್ತಾರೆ, ದೆಹಲಿ ಸಚಿವ ಮತ್ತು ಆಪ್ ನಾಯಕ ಗೋಪಾಲ್ ರಾಯ್ ಈ ವಿಷಯವನ್ನು ಅರಿತುಕೊಳ್ಳಬೇಕು. ಮೊನ್ನೆ ಯಷ್ಟೇ ಅವರು ನಿಷೇಧದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಮನೆ ಮುಂದೆ ಪಟಾಕಿ ಸುಡಲಾಯಿತು, ಆದರೆ ಸನಾತನ ಧರ್ಮಕ್ಕೆ ಮಾತ್ರ ನ್ಯಾಯಾಲಯವು ಹಸಿರು ಪಟಾಕಿಗಳನ್ನು ಸುಡಲು ಅನುಮತಿ ನೀಡಿದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.