ಗಣೇಶನಿಗೆ 10 ಕೆ.ಜಿ ತೂಕದ ಚಿನ್ನದ ಕಿರೀಟ ತೊಡಿಸಿದ ಭಕ್ತ
Team Udayavani, Sep 13, 2021, 4:28 PM IST
ಮುಂಬೈ : ಪುಣೆಯ ದಗ್ದುಶೇತ್ ಹಲವಾಯಿ ಪ್ರದೇಶದ ದೇವಸ್ಥಾನದಲ್ಲಿರುವ ಗಣೇಶನಿಗೆ 10 ಕೆ.ಜಿ. ತೂಕದ ಬಂಗಾರದ ಕಿರೀಟ ದಾನದ ರೂಪದಲ್ಲಿ ಬಂದಿದೆ.
ಗಣೇಶ ಚತುರ್ಥಿ ನಿಮಿತ್ತ ಇಲ್ಲಿಯ ದೇವಸ್ಥಾನಕ್ಕೆ ಭಕ್ತರೊಬ್ಬರು ಚಿನ್ನದ ಕಿರೀಟ ನೀಡಿದ್ದಾರೆ. ಆದರೆ, ತಮ್ಮ ಹೆಸರು ಬಹಿರಂಗ ಪಡಿಸದಂತೆ ದೇವಸ್ಥಾನದ ಆಡಳಿತ ಮಂಡಳಿಗೆ ದಾನಿಗಳು ಮನವಿ ಮಾಡಿಕೊಂಡಿದ್ದಾರೆ.
ವಿಶೇಷವಾಗಿ ಸಿದ್ಧಪಡಿಸಲಾದ ಕಿರೀಟವನ್ನು ಗಣೇಶನ ಮೂರ್ತಿಗೆ ತೊಡಿಸಲಾಗಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.
ದಗ್ದುಶೇತ್ ಹಲವಾಯಿ ಗಣೇಶ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅದರಲ್ಲೂ ಗಣೇಶೋತ್ಸವಕ್ಕೆ ಭಕ್ತರ ಸಾಗರವೇ ಹರಿದು ಬರುತ್ತದೆ.
ಇನ್ನು ಮಹಾರಾಷ್ಟ್ರದಲ್ಲಿ ಪ್ರತಿ ವರ್ಷ ಗಣೇಶನ ಹಬ್ಬವನ್ನು ಸಡಗರ ಸಂಭ್ರದಿಂದ ಆಚರಿಸಲಾಗುತ್ತದೆ. ಸಾರ್ವಜನಿಕ ಗಣಪತಿಗಳನ್ನು ಭಕ್ತಿಪೂರ್ವಕವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಗಣೇಶನ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆಗಳು ಜರುಗುತ್ತವೆ. ಈ ಬಾರಿ ಕೋವಿಡ್ ಸೋಂಕಿನ ಭೀತಿ ಹಿನ್ನೆಲೆ ಅಬ್ಬರದ ಗಣೇಶೋತ್ಸವಕ್ಕೆ ಕೊಂಚ ಬ್ರೇಕ್ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.