ವಜ್ರ ವ್ಯಾಪಾರಿಯ 58.16 ಕೋ.ರೂ.ಆಸ್ತಿ ಜಫ್ತಿ
Team Udayavani, Dec 22, 2017, 3:09 PM IST
ಮುಂಬಯಿ: ನಕಲಿ ಕಂಪನಿಗಳ ಮೂಲಕ 1,478 ಕೋ. ರೂ. ಗಳಷ್ಟು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ ಆರೋಪಕ್ಕೊಳಗಾಗಿರುವ ನಗರದ ವಜ್ರ ವ್ಯಾಪಾರಿ ಮತ್ತವರ ಸಹಾಯಕನಿಗೆ ಸೇರಿದ ಸುಮಾರು 58.16 ಕೋ.ರೂ.ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ರಾಜೇಶ್ವರ ಎಕ್ಸ್ಪೋರ್ಟ್ಸ್ ನ ರಿತೇಶ್ ಜೈನ್ ಮತ್ತವರ ಸಹಾಯಕ ಅಮೃತಲಾಲ್ ಜೈನ್ ಅವರು ಕೇಂದ್ರ ಸರಕಾರ 500 ಮತ್ತು 1,000 ರೂ. ಮೌಲ್ಯದ ನೋಟುಗಳನ್ನು ಅಪಮೌಲ್ಯಗೊಳಿಸಿದ ಬಳಿಕ ನಕಲಿ ಕಂಪನಿಗಳ ಹೆಸರಿನಲ್ಲಿ 100 ಕೋ. ರೂ.ಗಳಷ್ಟು ಹಣವನ್ನು ಠೇವಣಿ ಇರಿಸಿದುದು ತನಿಖೆಯ ವೇಳೆ ಬಹಿರಂಗಕ್ಕೆ ಬಂದಿತ್ತು.
ಈ ಪ್ರಕರಣದ ಹಿನ್ನೆಲೆಯಲ್ಲಿ 10 ಸ್ಥಿರಾಸ್ತಿಗಳು ಮತ್ತು 58.16 ಕೋ. ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಜಫ್ತಿ ಮಾಡಿದೆ. ಜಫ್ತಿ ಮಾಡಿಕೊಳ್ಳಲಾಗಿರುವ ಆಸ್ತಿಗಳು ರಿತೇಶ್ ಮತ್ತು ಅಮೃತ್ಲಾಲ್ ಅವರಿಗೆ ಸೇರಿದವಾಗಿವೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಯೋರ್ವರು ತಿಳಿಸಿದರು.
ಈ ಹಿಂದೆ ಜಾರಿ ನಿರ್ದೇಶನಾಲಯ ನಕಲಿ ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದ ಆರೋಪದ ಮೇಲೆ ರಿತೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ, 2002ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಮುಂಬಯಿ ಪೊಲೀಸರು ಕಳೆದ ಡಿಸೆಂಬರ್ನಲ್ಲಿ ರಿತೇಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.