ಬಿಜೆಪಿ ನಾಯಕನಿಗೆ ಕರೆ ಮಾಡಿದ ಮಮತಾ ಆಡಿಯೋ ವೈರಲ್ ..!


Team Udayavani, Mar 31, 2021, 1:30 PM IST

Did Call BJP Leader, Leaking Conversation An Offence: Mamata Banerjee

ಕೊಲ್ಕತ್ತಾ :  ಬಿಜೆಪಿಗೆ ಸೇರ್ಪಡೆಗೊಂಡ ತಮ್ಮ ಪಕ್ಷದ ಮಾಜಿ ನಾಯಕರೊಂದಿಗೆ ಮಾತನಾಡುವುದು ಅಪರಾಧವಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ನಾಯಕ ಪ್ರೇಲೆ ಪಾಲ್ ಅವರೊಂದಿಗಿನ ಸಂಭಾಷಣೆ  ಎಂದು ಹೇಳಲಾದ ಆಡಿಯೋ ಸೋರಿಕೆಯಾದ ಹಿನ್ನಲೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೀಡು ಮಾಡಿತ್ತು, ಆರಂಭದಲ್ಲಿ ನಿರಾಕರಿಸಿತ್ತಾದರೂ, ಸಂವಹನವು ನಡೆದಿದೆ ಎಂದು ಪಕ್ಷ ಹೇಳಿದೆ.

ಓದಿ :   ಏ.1 ರಿಂದ 45 ವರ್ಷ ಮೇಲಿನ ಎಲ್ಲರಿಗೂ ಲಸಿಕೆ: 2000 ಹೆಚ್ಚುವರಿ ಲಸಿಕಾ ಕೇಂದ್ರ: ಸುಧಾಕರ್

ಈ ಸಂಭಾಷಣೆಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, ಹೌದು ನಾನು ಆ ಬಿಜೆಪಿ ನಾಯಕರಿಗೆ ಕರೆ ಮಾಡಿದ್ದೆ. ಅವರ ಸಂಖ್ಯೆ ಸಿಕ್ಕಿದಾಗ ನಾನು ಅವರಲ್ಲಿ ಮಾತನಾಡಿದ್ದೇನೆ. ಚೆನ್ನಾಗಿರಿ, ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದೆ. ಇದರಲ್ಲಿ ನನ್ನದೇನು ಅಪರಾದವಿದೆ..? ಎಂದು ಅವರು ಪ್ರಶ್ನಿಸಿದ್ದಾರೆ.

ನಾನೊಂದು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾನು ಯಾರ ಸಹಾಯ ಬೇಕಾದರೂ ಪಡೆದುಕೊಳ್ಳಬಹುದು. ಯಾರಲ್ಲಿ ಬೇಕಾದರೂ ಮಾತನಾಡಬಹುದು. ಅದರಲ್ಲಿ ಏನೂ ತಪ್ಪಿಲ್ಲ. ಅಪರಾಧ ಏನಿದೆ ಅದರಲ್ಲಿ..? ಪಕ್ಷಾಂತರಗೊಂಡವರಲ್ಲಿ ನಾನು ಮಾತಾಡಿದ್ದು, ಇದೇ ಮೊದಲಲ್ಲ, ಈ ಹಿಂದೆಯೂ ನಾನು ಸಂಪರ್ಕಿಸಿದ್ದೇನೆ.  ಆದರೇ, ಸಂಭಾಷಣೆಯನ್ನು ಯಾರಾದರೂ ವೈರಲ್ ಮಾಡಿದರೆ, ಅದು ಅಪರಾಧ. ಸಂಭಾಷಣೆಯನ್ನು ವೈರಲ್ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

‘ನಂದಿಗ್ರಾಮ್ ಗೆಲ್ಲಲು ನೀವು ನಮಗೆ ಸಹಾಯ ಮಾಡಬೇಕು. ನೋಡಿ, ನಿಮಗೆ ಕೆಲವು ಅಡಚಣೆಗಳಿವೆ ಎಂದು ನನಗೆ ತಿಳಿದಿದೆ, ಅದು ಅಧಿಕಾರಿಯ ಕಾರಣದಿಂದ ಎನ್ನುವುದು ಕೂಡ ತಿಳಿದಿದೆ” ಎಂದು  ಬ್ಯಾನರ್ಜಿ ಅವರು ಸುವೇಂದು ಅಧಿಕಾರಿಯ ಬೆಂಬಲಿಗರಾದ ಪಾಲ್ ಅವರಿಗೆ ಹೇಳುವುದನ್ನು ಆಡಿಯೋದಲ್ಲಿ ಗಮನಿಸಬಹುದಾಗಿದೆ. “ಇನ್ನು ಮುಂದೆ ನಾನು ಎಲ್ಲವನ್ನೂ ನೋಡಿಕೊಳ್ಳುತ್ತೇನೆ” ಎಂದು ಬ್ಯಾನರ್ಜಿ  ಭರವಸೆ ನೀಡುವುದನ್ನೂ ಕೂಡ ಆಡಿಯೋದಲ್ಲಿ ಕೇಳಬಹುದು.

ಓದಿ :   ಕೋವಿಡ್ ನಿಯಂತ್ರಣ : ಮಾರ್ಕೆಟ್ ಪ್ರವೇಶಿಸಲು ಇಲ್ಲಿ ಶುಲ್ಕ ಪಾವತಿಸಬೇಕು..!

ಇನ್ನು, ಪಾಲ್ ಕೂಡ ಮಮತಾ ಬ್ಯಾನರ್ಜಿ ಅವರಿಗೆ ಸಂಭಾಷಣೆಯಲ್ಲಿ ಪ್ರತಿಕ್ರಿಯಿಸಿದ್ದು, ದೀದಿ ನೀವು ಕರೆ ಮಾಡಿರುವ ಬಗ್ಗೆ ನನಗೆ ಗೌರವವಿದೆ. ನಾನು ಸುವೇಂದು ಅಧಿಕಾರಿಯವರೊಂದಿಗಿದ್ದೇನೆ. ಹಾಗಾಗಿ ನಾನು ಅವರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ಬಿಜೆಪಿ ನಾಯಕ ಪಾಲ್, ತೃಣಮೂಲಕ್ಕೆ ಮರಳಿ ಬನ್ನಿ ಎಂಬ ಮಮತಾ ಬ್ಯಾನರ್ಜಿ ಅವರ ಮಾತನ್ನು ನಾನು ತಿರಸ್ಕರಿಸಿದ್ದೇನೆ. ನಾನು ಈಗ ಬಿಜೆಪಿಗೆ ಕೆಲಸ ಮಾಡುತ್ತಿದ್ದೇನೆ. ಬಿಜೆಪಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು, ಆಡಿಯೋ ಸಂಭಾಷಣೆಯ ಬಗ್ಗೆ ಮಮತಾ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಅಧಿಕಾರವನ್ನು ಚುನಾವಣೆಯ ಹಿನ್ನಲೆಯಲ್ಲಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೊಶ ಹೊರ ಹಾಕಿದೆ.

ಬಿಜೆಪಿಯ ಬಂಗಾಳ ಉಸ್ತುವಾರಿ, ಕೈಲಾಶ್ ವಿಜಯವರ್ಗಿಯಾ ನೇತೃತ್ವದ ನಿಯೋಗವು ಚುನಾವಣಾ ಆಯೋಗಕ್ಕೆ ಮಮತಾ ಹಾಗೂ ಪಾಲ್ ಸಂಭಾಷಣೆಯ ಆಡಿಯೋವನ್ನು ನೀಡುವುದರ ಮೂಲಕ ಮಮತಾ ವಿರುದ್ಧ ದೂರು ನೀಡಿದೆ ಎಂಬ ವರದಿಯಾಗಿದೆ.

ಓದಿ :  ವಂಚಕರು ದಾಖಲೆಗಳನ್ನು ಕೇಳುತ್ತಾರೆ : ‘ಬಿ ಅಲರ್ಟ್’ ಗ್ರಾಹಕರಿಗೆ ಎಸ್ ಬಿ ಐ ಮನವಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.