![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 28, 2023, 6:31 PM IST
ಕೋಲ್ಕತಾ: ಅಭಿಷೇಕ್ ಬ್ಯಾನರ್ಜಿ ಅವರ ಬೆಂಗಾವಲು ವಾಹನದ ಮೇಲಿನ ದಾಳಿ ಮತ್ತು ಬಿರ್ಬಹಾ ಹಂಸದಾ ಅವರ ವಾಹನವನ್ನು ಧ್ವಂಸಗೊಳಿಸಿದ್ದಕ್ಕಾಗಿ ಬಿಜೆಪಿಯನ್ನು ದೂಷಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಭಾನುವಾರ ಕಟುವಾಗಿ ಟೀಕಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಇತರರ ಮೇಲೆ ಆರೋಪ ಹೊರಿಸುವ ಪ್ರವೃತ್ತಿಯನ್ನು ಹೊಂದಿದ್ದು, ಈ ದಾಳಿಯು ಅವರ ಸ್ವಂತ ವೈಫಲ್ಯವನ್ನು ತೋರಿಸುತ್ತದೆ. ನಮ್ಮ ದೀದಿ ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದರಲ್ಲಿ ನಿಪುಣರು. ಅವರು ಆದಿವಾಸಿಗಳ ನಡುವೆ ತೊಂದರೆ ಸೃಷ್ಟಿಸುತ್ತಿದ್ದಾರೆ ಎಂಬುದು ಇಂದಿನವರೆಗೂ ಏಕೆ ತಿಳಿದಿರಲಿಲ್ಲ? ಟಿಎಂಸಿಗೆ ಮತ ಹಾಕದ ಕಾರಣ ಟಿಎಂಸಿ ನಾಯಕರೊಬ್ಬರು ಕೆಲವು ಆದಿವಾಸಿಗಳಿಗೆ ಅವರ ಜೊತೆ ಮಾತನಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಚೌಧರಿ ಆರೋಪಿಸಿದ್ದಾರೆ.
“ಬೆಂಗಾವಲು ಪಡೆ ಮೇಲೆ ದಾಳಿಯಲ್ಲಿ ನಿಮ್ಮ ಪಕ್ಷದವರೇ ಭಾಗಿಯಾಗಿಲ್ಲವೆಂದು ಹೇಗೆ ಹೇಳುತ್ತೀರಿ? ನಿಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಆದಿವಾಸಿಗಳು ನಿಮಗೆ ಮತ ಹಾಕಿಲ್ಲ, ಅವರ ಜತೆ ಮಾತನಾಡುವುದಿಲ್ಲ ಎಂದು ಬೆದರಿಕೆ ಹಾಕಿದರು. ಇದು ನಿಮ್ಮ ನೀತಿಯೇ? , ನಿಮಗೆ ಮತ ಹಾಕುವ ಜನರನ್ನು ಮಾತ್ರ ಪ್ರಶಂಸಿಸುವುದೇ?” ಎಂದು ಪ್ರಶ್ನಿಸಿದ್ದಾರೆ.
ಮೇ 26 ರಂದು ಜಾರ್ಗ್ರಾಮ್ನಲ್ಲಿ ರೋಡ್ ಶೋ ಮುಗಿಸಿ ಲೋಧಶೂಲಿ ಮೂಲಕ ಶಾಲ್ಬನಿಗೆ ತೆರಳುತ್ತಿದ್ದಾಗ ಅಭಿಷೇಕ್ ಬ್ಯಾನರ್ಜಿ ಅವರ ಬೆಂಗಾವಲು ಪಡೆ ಮತ್ತು ಹನ್ಸ್ದಾ ಅವರ ವಾಹನದ ಮೇಲೆ ದಾಳಿ ನಡೆದಿತ್ತು. ದಾಳಿಗೆ ಸಂಬಂಧಿಸಿದಂತೆ ಕುರ್ಮಿ ಸಮುದಾಯದ ಅಧ್ಯಕ್ಷ ರಾಜೇಶ್ ಮಹಾತಾ ಸೇರಿದಂತೆ ಐವರನ್ನು ಜಾರ್ಗ್ರಾಮ್ ಪೊಲೀಸರು ಬಂಧಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.