Lok Sabha Election; ಐಎನ್‌ಡಿಐಎಗೆ ದೀದಿ ಆಘಾತ: ಸೀಟು ಹಂಚಿಕೆಗೆ ಹೊಸ ಸೂತ್ರ

ನಿರ್ದಿಷ್ಟ ಕ್ಷೇತ್ರ ನಮಗೆ ಬಿಡಿ: ಮಮತಾ; ಕಾಂಗ್ರೆಸ್‌ ಕಿಡಿ

Team Udayavani, Jan 24, 2024, 6:50 AM IST

westLok Sabha Election; ಐಎನ್‌ಡಿಐಎಗೆ ದೀದಿ ಆಘಾತ: ಸೀಟು ಹಂಚಿಕೆಗೆ ಹೊಸ ಸೂತ್ರ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿಪಕ್ಷಗಳ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಕುಗಳು ಹೆಚ್ಚಾಗುತ್ತಿವೆ. ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಕಾಂಗ್ರೆಸ್‌ ನಡುವೆ ವಾಗ್ವಾದಗಳು ದಿನೇ ದಿನೆ ಬಿರುಸಾಗುತ್ತಿವೆ.

ಅದಕ್ಕೆ ಹೊಸ ಸೇರ್ಪಡೆಯೆಂಬಂತೆ ಸೋಮವಾರ ಸರ್ವಧರ್ಮ ಸಮನ್ವಯ ನಡಿಗೆಯ ವೇಳೆ ಸಿಎಂ ಮಮತಾ ಅವರು ಹೊಸ ಯೋಜನೆ ಯೊಂದನ್ನು ವಿಪಕ್ಷಗಳ ಒಕ್ಕೂಟದ ಮುಂದಿಟ್ಟಿದ್ದಾರೆ. ಲೋಕಸಭೆ ಚುನಾವಣೆ ಯಲ್ಲಿ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಪರ್ಧಿಸಲು ಆಯಾ ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಬಿಡಬೇಕು. ಕಾಂಗ್ರೆಸ್‌ 300 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿ. ಅಂಥ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸದೆ ನಾವು ಅವರನ್ನು ಬೆಂಬಲಿಸೋಣ. ಆದರೆ ಅವರು ನಮ್ಮ ಸಲಹೆಗಳನ್ನು ಪರಿಗಣಿಸದೆ ಮೊಂಡುವಾದ ಮುಂದಿಡುತ್ತಿದ್ದಾರೆ ಎಂದು ದೀದಿ ಹೇಳಿದ್ದಾರೆ.

ಸೀಟು ಹಂಚಿಕೆಯಲ್ಲಿ ವಿಳಂಬಕ್ಕೂ ಅಸಮಾ ಧಾನ ವ್ಯಕ್ತಪಡಿಸಿರುವ ದೀದಿ, “ಬಿಜೆಪಿಯನ್ನು ಎದುರಿಸಿ, ಹೋರಾಡುವ ಶಕ್ತಿ ನನಗಿದೆ. ಆದರೆ ಕೆಲವರು ಸೀಟು ಹಂಚಿಕೆ ವಿಚಾರದಲ್ಲಿ ನಮ್ಮನ್ನು ಪರಿಗಣಿಸುತ್ತಲೇ ಇಲ್ಲ. ನಿಮಗೆ ಬಿಜೆಪಿ ವಿರುದ್ಧ ಹೋರಾಡಲು ಮನಸ್ಸಿಲ್ಲದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ಆ ಪಕ್ಷಕ್ಕೆ ಲಾಭ ಮಾಡಿಕೊಡಬೇಡಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಂಗಾಲ ಸಿಪಿಎಂ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ, “ಮಮತಾ ಅವರಿಗೆ ಸ್ಪಷ್ಟವಾದ ಸಿದ್ಧಾಂತವಿಲ್ಲ. ಬಿಜೆಪಿ ದೀದಿಯ ಮಿತ್ರಪಕ್ಷ. ಅವರ ಎಲ್ಲ ಹತಾಶೆಗಳು ಈಗ ಹೊರಗೆ ಬರುತ್ತಿವೆ’ ಎಂದಿದ್ದಾರೆ.

ದೊಡ್ಡ ವಿಚಾರವೇನೂ ಅಲ್ಲ: ರಾಹುಲ್‌
“ಮಮತಾ ನನಗೆ ಆತ್ಮೀಯರು. ಕೆಲವೊಮ್ಮೆ ಹೇಳಿಕೆಗಳು, ಪ್ರತಿಹೇಳಿಕೆಗಳೆಲ್ಲ ಸಹಜ. ಅದರಿಂದ ಏನೂ ಸಮಸ್ಯೆಯಾಗದು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಮಮತಾ ಅವರ ಸಹಾಯವಿಲ್ಲದೆ ಪ. ಬಂಗಾಲದಲ್ಲಿ ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿದೆ ಎಂಬ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿಕೆ ಕುರಿತು ಪ್ರಶ್ನಿಸಿದಾಗ ರಾಹುಲ್‌ ಈ ಹೇಳಿಕೆ ನೀಡಿದ್ದಾರೆ.

ಕುತೂಹಲ ಕೆರಳಿಸಿದ ಬಿಹಾರ ರಾಜಕೀಯ
ಮತ್ತೊಂದೆಡೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮತ್ತು ಮಿತ್ರಪಕ್ಷ ಆರ್‌ಜೆಡಿ ನಡುವೆ “ಎಲ್ಲವೂ ಸರಿ ಇಲ್ಲ’ ಎಂಬ ಗುಸು ಗುಸುಗಳ ನಡುವೆಯೇ ಮಂಗಳವಾರ ನಿತೀಶ್‌ ಅನಿರೀಕ್ಷಿತವಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದು, ರಾಜಕೀಯ ಪಡಸಾಲೆಯಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಂಗಳವಾರ ಸರಕಾರಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಿತೀಶ್‌, ಅಲ್ಲಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ಅಲೇìಕರ್‌ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಂಪುಟ ಸಚಿವ ವಿಜಯ್‌ ಚೌಧರಿ ನಿತೀಶ್‌ಗೆ ಸಾಥ್‌ ನೀಡಿದ್ದರು. ಈ ದಿಢೀರ್‌ ಭೇಟಿಯಿಂದಾಗಿ ನಿತೀಶ್‌ ಮತ್ತೆ ಎನ್‌ಡಿಎ ಸಖ್ಯ ಬೆಳೆಸಲಿದ್ದಾರೆ ಎಂಬ ಸುದ್ದಿಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.