Divya Pahuja; ಗುರ್ಗಾಂವ್ ಹೋಟೆಲ್ ನಲ್ಲಿ ಕೊಲೆಯಾಗಿದ್ದ ಮಾಡೆಲ್ ಶವ ಕಾಲುವೆಯಲ್ಲಿ ಪತ್ತೆ
Team Udayavani, Jan 13, 2024, 12:27 PM IST
ಹೊಸದಿಲ್ಲಿ: ಕಳೆದ ವಾರ ಗುಂಡಿನಿಂದ ಹತ್ಯೆಯಾಗಿದ್ದ ಮಾಡೆಲ್ ದಿವ್ಯಾ ಪಹುಜಾ ಅವರ ಮೃತ ದೇಹ ಪತ್ತೆಯಾಗಿದೆ. ಗುರ್ಗಾಂವ್ ಹೋಟೆಲ್ ನಲ್ಲಿ ಹತ್ಯೆಯಾಗಿದ್ದ ದಿವ್ಯಾ ಅವರ ಮೃತದೇಹ ಹರ್ಯಾಣದ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ ನ ಭಖ್ರಾ ಕಾಲುವೆಗೆ ಮೃತದೇಹವನ್ನು ಎಸೆಯಲಾಗಿತ್ತು, ಆದರೆ ದೇಹವು ಪಕ್ಕದ ರಾಜ್ಯಕ್ಕೆ ಹರಿದು ಹೋಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹರ್ಯಾಣದ ತೊಹ್ನಾದಲ್ಲಿ ಗುರ್ಗಾಂವ್ ಪೊಲೀಸರ ತಂಡವು ಮೃತದೇಹವನ್ನ ಪತ್ತೆ ಮಾಡಿದೆ. ಪೊಲೀಸರು ಮೃತದೇಹದ ಫೋಟೊಗಳನ್ನು ಪಹುಜಾ ಕುಟುಂಬಿಕರಿಗೆ ಕಳುಹಿಸಿದ್ದಾರೆ. ಅವರು ಗುರುತು ಪತ್ತೆ ಮಾಡಿದ ಬಳಿಕ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ.
ಜನವರಿ 3ರಂದು ಮೃತದೇಹವನ್ನು ಪಂಜಾಬ್ ಕಾಲುವೆಯಲ್ಲಿ ಎಸೆದಿರುವುದಾಗಿ ಪ್ರಕರಣದ ಆರೋಪಿಗಳಲ್ಲಿ ಓರ್ವ ಶುಕ್ರವಾರ ಹೇಳಿಕೊಂಡಿದ್ದ. ಜನವರಿ ಎರಡರಂದು ಮಾಡೆಲ್ ದಿವ್ಯಾ ಪಹುಜಾ ಕೊಲೆಯಾಗಿತ್ತು.
ನಿನ್ನೆ ಸಂಜೆ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಂಧನಕ್ಕೊಳಗಾದ ಬಾಲರಾಜ್ ಗಿಲ್, ಗುರುಗ್ರಾಮ್ನಿಂದ ಸುಮಾರು 270 ಕಿಲೋಮೀಟರ್ ದೂರದಲ್ಲಿರುವ ಪಟಿಯಾಲಾದಲ್ಲಿನ ಕಾಲುವೆಯಲ್ಲಿ ಮಾಜಿ ಮಾಡೆಲ್ ಶವವನ್ನು ವಿಲೇವಾರಿ ಮಾಡಿರುವುದಾಗಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ.
ಜನವರಿ 2 ರಂದು ಗುರ್ಗಾಂವ್ ಹೋಟೆಲ್ ನಲ್ಲಿ ದಿವ್ಯಾ ಪಹುಜಾ ಅವರನ್ನು ಕೊಲ್ಲಲಾಯಿತು, ಕೊಲೆಗಾರರು ಆಕೆಯ ದೇಹವನ್ನು ಹೋಟೆಲ್ ನಿಂದ ಕಾರ್ ಗೆ ಎಳೆದುಕೊಂಡು ಹೋಗುತ್ತಿರುವು ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿತ್ತು.
27 ವರ್ಷದ ದಿವ್ಯಾಳನ್ನು ಐವರು ಪುರುಷರು ಹೋಟೆಲ್ ಕೋಣೆಗೆ ಕರೆದೊಯ್ದರು. ಹೋಟೆಲ್ ಮಾಲೀಕನ ಅಶ್ಲೀಲ ಚಿತ್ರಗಳೊಂದಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಆಕೆಯ ತಲೆಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿವ್ಯಾ ಪಹುಜಾ 2016 ರಲ್ಲಿ ತನ್ನ ಆಗಿನ ಗೆಳೆಯ ಮತ್ತು ಗುರುಗ್ರಾಮ್ ಗ್ಯಾಂಗ್ಸ್ಟರ್ ಸಂದೀಪ್ ಗಡೋಲಿಯ ನಕಲಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದಕ್ಕಾಗಿ ಜೈಲಿನಲ್ಲಿದ್ದಳು. ಕಳೆದ ವರ್ಷ ಜೂನ್ನಲ್ಲಿ ಆಕೆಗೆ ಜಾಮೀನು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.