ಆಪರೇಶನ್ ಮಾಡೋದು ಅರ್ಧಕ್ಕೆ ಬಿಟ್ಟು ಜಿರಳೆ ಚಿತ್ರೀಕರಣ ಮಾಡಿದ ವೈದ್ಯ!


Team Udayavani, Jan 10, 2017, 4:18 PM IST

OT-cockroach-600.jpg

ಮುಂಬಯಿ : ಥಾಣೆ ಮುನಿಸಿಪಲ್‌ ಕಾರ್ಪೊರೇಶನ್‌ ನಡೆಸುತ್ತಿರುವ ಥಾಣೆಯ ಅತೀ ದೊಡ್ಡ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಕಳೆದ ಶುಕ್ರವಾರ 45 ವರ್ಷ ಪ್ರಾಯದ ವ್ಯಕ್ತಿಯೊಬ್ಬರಿಗೆ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುತ್ತಿದ್ದ ವೇಳೆ, ಆಪರೇಶನ್‌ ಥಿಯೇಟರ್‌ನಲ್ಲಿ ಜಿರಳೆ ಓಡಾಡುತ್ತಿರುವುದನ್ನು ಕಂಡು ಅದನ್ನು ಜ್ವಲಂತ ದಾಖಲೆಗಾಗಿ ಚಿತ್ರೀಕರಿಸುವುದಕ್ಕಾಗಿ ವೈದ್ಯರು ಕೆಲ ಹೊತ್ತು ಶಸ್ತ್ರ ಚಿಕಿತ್ಸೆಯನ್ನು ನಿಲ್ಲಿಸಿಬಿಟ್ಟರು. 

ಹಿರಿಯ orthopaedic ಸರ್ಜನ್‌ ಡಾ. ಸಂಜಯ್‌ ಬರಾನ್‌ವಾಲಾ ಅವರು ಛತ್ರಪತಿ ಶಿವಾಜಿ ಮಹಾರಾಜ್‌ ಹಾಸ್ಪಿಟಲ್‌ನಲ್ಲಿ ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದ ವೇಳೆ ಕಂಡು ಬಂದ ಈ ಗಂಭೀರ ಹಾಗೂ ಕಳವಳಕಾರಿ ವಿದ್ಯಮಾನವನ್ನು ವಿಡಿಯೋದಲ್ಲಿ ದಾಖಲಿಸಿಕೊಂಡು ಆಡಳಿತ ವರ್ಗದ ಗಮನಕ್ಕೆ ತಂದರು. 

ಆದರೆ ಈ ಆಸ್ಪತ್ರೆಯಲ್ಲಿನ ಅನೈರ್ಮಲ್ಯಕ್ಕೆ ಇದೊಂದೇ ಅಥವಾ ಇದೇ ಮೊದಲ ಉದಾಹರಣೆ ಆಗಿಲ್ಲ ಎನ್ನುವುದು ಗಮನಾರ್ಹ. ಈ ಹಿಂದೆಯೂ ಅನೇಕ ಬಾರಿ ಆಸ್ಪತ್ರೆಯ ವೈದ್ಯರು ರೋಗಿಗಳ ಪಾಲಿಗೆ ಮಾರಣಾಂತಿಕವಾಗಬಲ್ಲ, ಆಪರೇಶನ್‌ ಥಿಯೇಟರ್‌ನಲ್ಲಿನ ಅತ್ಯಂತ ಕಳಪೆ ನೈರ್ಮಲ್ಯದ ಬಗ್ಗೆ  ಆಡಳಿತ ವರ್ಗವನ್ನು ಎಚ್ಚರಿಸಿದ್ದರು. ಇಲ್ಲಿನ ಈ ಗಂಭೀರ ಲೋಪ ದೋಷಗಳ ಬಗ್ಗೆ ಆಡಳಿತ ವರ್ಗಕ್ಕೆ ಎಷ್ಟು ಬಾರಿ ವರದಿ ಮಾಡಿದರೂ ಯಾವ ಪ್ರಯೋಜನವೂ ಆಗಿಲ್ಲ ಎಂದು ವೈದ್ಯರು ಮತ್ತು ನರ್ಸ್‌ಗಳು ಹೇಳುತ್ತಿರುತ್ತಾರೆ. 

ಇಲ್ಲಿನ ಆಪರೇಶನ್‌ ಥಿಯೇಟರ್‌ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ರೋಗಿಗಳ ಪೈಕಿ ಶೇ.25 ಮಂದಿಗೆ ಶಸ್ತ್ರಚಿಕಿತ್ಸೆಯ ಬಳಿಕದಲ್ಲಿ ಸೋಂಕು ತಗಲಿದ ಗಂಭೀರ ನಿದರ್ಶನಗಳಿವೆ. ಈ ಬಗ್ಗೆ ಡಾ. ಬರಾನ್‌ವಾಲಾ ಅವರು ಕೆಳೆದ ಒಂದು ತಿಂಗಳಲ್ಲೇ ಅನೇಕ ದೂರುಗಳನ್ನು ಆಡಳಿತ ವರ್ಗಕ್ಕೆ ನೀಡಿದ್ದಾರೆ. ಆದರೆ ಯಾವ ಪ್ರಯೋಜನವೂ ಆಗಿಲ್ಲ. 

ಸಾಮಾನ್ಯವಾಗಿ ಹೆಚ್ಚಿನ ಆಸ್ಪತ್ರೆಗಳಲ್ಲಿ ಆಪರೇಶನ್‌ ಥಿಯೇಟರ್‌ಗಳಲ್ಲಿನ ನೈರ್ಮಲ್ಯಕ್ಕೆ ಅತ್ಯಂತ ಮಹತ್ವವನ್ನು ಕೊಡಲಾಗುತ್ತದೆ. ಆದರೆ ಇಲ್ಲಿ ಅದು ನಗಣ್ಯವಾಗಿದೆ. 

ಹಾಗೆ ನೋಡಿದರೆ ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್‌ ಆಸ್ಪತ್ರೆಯು ಸಣ್ಣ ಆಸ್ಪತ್ರೆಯೇನೂ ಅಲ್ಲ ; ಇದು 500 ಹಾಸಿಗೆಗಳ ದೊಡ್ಡ ಆಸ್ಪತ್ರೆ; ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜಿಗೆ ಸೇರಿರುವ ಆಸ್ಪತ್ರೆ. ಇಲ್ಲಿ ನಾಲ್ಕು ಆಪರೇಶನ್‌ ಥಿಯೇಟರ್‌ಗಳಿವೆ. 2013ರಲ್ಲಿ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಅವರು ಇವುಗಳನ್ನು ಉದ್ಘಾಟಿಸಿದ್ದರು. ಆದರೆ ನಾಲ್ಕರಲ್ಲಿ ಒಂದು ಮಾತ್ರವೇ ಉಪಯೋಗವಾಗುತ್ತಿದೆ; ಕಾರಣ ಸಿಬಂದಿ ಕೊರತೆ ! 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.