![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 14, 2019, 4:23 PM IST
ಕೋಲ್ಕತ : ದೇಶಾದ್ಯಂತ ಸಹಸ್ರಾರು ವೈದ್ಯರು ದಿನಪೂರ್ತಿ ಮುಷ್ಕರ ನಿರತರಾಗಿರುವಂತೆಯೇ ಈ ಮುಷ್ಕರವನ್ನು ಕಾನೂನು ಬಾಹಿರವೆಂದು ಘೋಷಿಸಬೇಕೆಂದು ಕೋರಿ ಕಲ್ಕತ್ತ ಹೈಕೋರ್ಟಿಗೆ ಇಂದು ಶುಕ್ರವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ
ಪೀಪಲ್ ಫಾರ್ ಬೆಟರ್ ಟ್ರೀಟ್ ಮೆಂಟ್ ಎಂಬ ಸೇವಾ ಸಂಘಟನೆಯ ಕುಣಾಲ್ ಸಹಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ವೈದ್ಯರ ಮುಷ್ಕರವನ್ನು ಕಾನೂನು ಬಾಹಿರವೆಂದು ಘೋಷಿಸಬೇಕಲ್ಲದೆ ಈ ಮುಷ್ಕರವನ್ನು ಕೊನೆಗೊಳಿಸುವಂತೆ ಮಾಡಬೇಕು ಹಾಗೂ ಪಶ್ಚಿಮ ಬಂಗಾಲ ಸರಕಾರ ವೈದ್ಯರ ಸುರಕ್ಷೆಗೆ ತೆಗೆದುಕೊಂಡಿರುವ ಕ್ರಮಗಳನ್ನು ತಿಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಈ ಪಿಐಎಲ್ಗೆ ಉತ್ತರಿಸುವುದಕ್ಕೆ ಹೈಕೋರ್ಟ್ ಮಮತಾ ಬ್ಯಾನರ್ಜಿ ಸರಕಾರಕ್ಕೆ ಏಳು ದಿನಗಳ ಕಾಲಾವಕಾಶ ನೀಡಿದೆ. ಚೀಫ್ ಜಸ್ಟಿಸ್ ಟಿವಿ ಸುಬ್ರಮಣಿಯಮ್ ನೇತೃತ್ವದ ಕಲ್ಕತ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.