Parliament ನಲ್ಲಿ ಪ್ರಧಾನಿ ಹಾಸ್ಯ ಚಟಾಕಿ ಹಾರಿಸುವುದು ನಾಚಿಕೆಗೇಡು: ರಾಹುಲ್ ಕಿಡಿ

ಮೋದಿ ಜಿಯವರ ಮನಸ್ಸಿನಲ್ಲಿ ಪ್ರಧಾನಿಯ ಕೆಲಸ ಏನು ಎಂಬುದರ ಬಗ್ಗೆ ಸಂಪೂರ್ಣ ತಪ್ಪು ತಿಳುವಳಿಕೆ

Team Udayavani, Aug 11, 2023, 6:08 PM IST

1-dsad-asd

ಹೊಸದಿಲ್ಲಿ: ಮಣಿಪುರವು ತಿಂಗಳುಗಟ್ಟಲೆಯಿಂದ ಹೊತ್ತಿ ಉರಿಯುತ್ತಿರುವಾಗ ಭಾರತದ ಪ್ರಧಾನಿ ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುವುದು ನಾಚಿಕೆಗೇಡು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ತಮ್ಮ ಸರಕಾರದ ವಿರುದ್ಧ ತಂದ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನೀಡಿದ ಉತ್ತರಕ್ಕಾಗಿ  ಕಿಡಿ ಕಾರಿದರು. ‘ತಮ್ಮ ಎರಡು ಗಂಟೆಯ ಭಾಷಣದಲ್ಲಿ ಮಣಿಪುರಕ್ಕೆ ಕೇವಲ ಎರಡು ನಿಮಿಷಗಳನ್ನು ಮೀಸಲಿಟ್ಟರು’ ಎಂದರು.

“ಸಂಸತ್ತಿನ ಮಧ್ಯದಲ್ಲಿ ಕುಳಿತಿರುವ ಪ್ರಧಾನಿ ನಾಚಿಕೆಯಿಲ್ಲದೆ ನಗುತ್ತಿದ್ದರು… ಸಮಸ್ಯೆ ಕಾಂಗ್ರೆಸ್ ಅಥವಾ ನಾನಲ್ಲ, ಸಮಸ್ಯೆ ಮಣಿಪುರದಲ್ಲಿ ಏನು ನಡೆಯುತ್ತಿದೆ ಮತ್ತು ಅದನ್ನು ಏಕೆ ನಿಲ್ಲಿಸಲಾಗುತ್ತಿಲ್ಲ” ಎಂದು ಹೇಳಿದರು.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು “ಮಣಿಪುರದಲ್ಲಿ ಭಾರತ ಮಾತೆಯನ್ನು ಕೊಂದಿದ್ದಾರೆ” ಎಂಬ ನನ್ನ ಹೇಳಿಕೆಗಳು ಪೊಳ್ಳು ಮಾತುಗಳಲ್ಲ. ಬಿಜೆಪಿಯಿಂದ ಹಿಂದೂಸ್ಥಾನವನ್ನು ಕೊಲೆ ಮಾಡಲಾಗಿದೆ. ಪ್ರಧಾನಿ ಮಣಿಪುರದಲ್ಲಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಬಾರದು ಎಂದು ಬದ್ಧರಾಗಿದ್ದಾರೆ. ಸೇನೆಯು 2-3 ದಿನಗಳಲ್ಲಿ ಶಾಂತಿಯನ್ನು ತರಬಹುದು ಆದರೆ ಸರಕಾರ ಅದನ್ನು ನಿಯೋಜಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.

”ನರೇಂದ್ರ ಮೋದಿ ಜಿಯವರ ಮನಸ್ಸಿನಲ್ಲಿ ಭಾರತದ ಪ್ರಧಾನ ಮಂತ್ರಿಯ ಕೆಲಸ ಏನು ಎಂಬುದರ ಬಗ್ಗೆ ಸಂಪೂರ್ಣ ತಪ್ಪು ತಿಳುವಳಿಕೆ ಇದೆ. ಮೋದಿಯವರು ನಮ್ಮ ಪ್ರತಿನಿಧಿ ಎಂಬುದು ಅರ್ಥವಾಗುತ್ತಿಲ್ಲ. ಪ್ರಧಾನಿ ಕ್ಷುಲ್ಲಕ ರಾಜಕಾರಣಿಯಾಗಿ ಮಾತನಾಡಬಾರದು” ಎಂದರು.

ಮಣಿಪುರ ಸಿಎಂ ಮೂಗಿನ ನೇರದಿಂದ ಸಾವಿರಾರು ಆಯುಧಗಳನ್ನು ಲೂಟಿ ಮಾಡಲಾಗಿದೆ.ಹಾಗಾದರೆ ಅಮಿತ್ ಶಾ ಸಾವಿರಾರು ಆಯುಧಗಳನ್ನು ಲೂಟಿ ಮಾಡಲು ಬಯಸಿದ್ದರೆ? ಹಿಂಸಾಚಾರ ಮುಂದುವರೆಯಬೇಕೆಂದು ಅಮಿತ್ ಶಾ ಬಯಸಿದ್ದಾರಾ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.