ತಾಜ್‌ ಕೋಣೆಗಳಲ್ಲಿ ಹಿಂದೂ ವಿಗ್ರಹಗಳಿಲ್ಲ! ಭಾರತೀಯ ಪ್ರಾಚ್ಯವಸ್ತು ಇಲಾಖೆ ಸ್ಪಷ್ಟನೆ


Team Udayavani, May 14, 2022, 7:05 AM IST

ತಾಜ್‌ ಕೋಣೆಗಳಲ್ಲಿ ಹಿಂದೂ ವಿಗ್ರಹಗಳಿಲ್ಲ! ಭಾರತೀಯ ಪ್ರಾಚ್ಯವಸ್ತು ಇಲಾಖೆ ಸ್ಪಷ್ಟನೆ

ಆಗ್ರಾ: ವಿಶ್ವವಿಖ್ಯಾತ ತಾಜ್‌ ಮಹಲ್‌ ಮೂಲತಃ ಶಿವನ ದೇವಸ್ಥಾನ, ಅದರ ಹೆಸರು ತೇಜೋ ಮಹಾಲಯ ಎಂಬ ವಾದವೊಂದು ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಹಾಕಿದ್ದ ಅರ್ಜಿಯೊಂದನ್ನು ಅಲಹಾಬಾದ್‌ ಉಚ್ಚ ನ್ಯಾಯಾಲಯ ಇತ್ತೀಚೆಗಷ್ಟೇ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ (ಎಎಸ್‌ಐ) ಅಧಿಕಾರಿಯೊಬ್ಬರು ಪ್ರತಿ ಕ್ರಿಯಿಸಿ, ತಾಜ್‌ ಮಹಲ್‌ನೊಳಗಿನ ಮುಚ್ಚಿದ 22 ಕೋಣೆಗಳೊಳಗೆ ಹಿಂದೂ ದೇವರ ವಿಗ್ರಹಗಳಿಲ್ಲ.

ಹಾಗೆಯೇ ಆ ಕೋಣೆಗಳನ್ನು ಶಾಶ್ವತವಾಗಿ ಮುಚ್ಚಿಲ್ಲ. ಕಾಲಕಾಲಕ್ಕೆ ತೆಗೆದು ಕಟ್ಟಡದ ಸಂರಕ್ಷಣೆಗೆ ಅಗತ್ಯವಾದ ಕಾರ್ಯಗಳನ್ನು ಕೈಗೊಂಡು ಬರಲಾಗಿದೆ ಎಂದು ಹೇಳಿದ್ದಾರೆ.

ತಾಜ್‌ ಮಹಲ್‌ ಮೂಲತಃ ಶಿವನ ದೇವಸ್ಥಾನ ಎಂಬ ವಾದವನ್ನೂ ಎಎಸ್‌ಐ ಮೂಲಗಳು ಅಲ್ಲಗಳೆದಿವೆ. ತಾಜ್‌ ಮಹಲ್‌ನ ನೆಲಮಾಳಿಗೆಯಲ್ಲಿ ಒಟ್ಟು 100 ಸಾರ್ವಜನಿಕ ಕೋಣೆಗಳಿವೆ. ಇವುಗಳೆಲ್ಲ ವಿವಿಧ ವಿನ್ಯಾಸಗಳನ್ನು ಹೊಂದಿವೆ. ಅವು ಗಳನ್ನು ಭದ್ರತಾ ಕಾರಣಗಳಿಗಾಗಿ ಮುಚ್ಚ ಲಾಗಿದೆ. ಜನರು ಅಲ್ಲೆಲ್ಲ ಪ್ರವೇಶಿಸಿ ಹಾಳು ಮಾಡಬಾರದೆನ್ನುವುದೇ ಇದರ ಹಿಂದಿನ ಕಾಳಜಿ ಎಂದು ಅಧಿಕಾರಿ ಹೇಳಿದ್ದಾರೆ.

ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮೊಹಮ್ಮದ್‌ ಈ ಬಗ್ಗೆ ಪ್ರತಿ ಕ್ರಿಯಿಸಿ, ತಾನು ಅಲ್ಲಿ ಉಸ್ತುವಾರಿಯಾ ಗಿದ್ದಾಗ ಆ ಕೊಠಡಿಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಕಂಡಿಲ್ಲ ಎಂದಿದ್ದಾರೆ.

ತಾಜ್‌ ಜಾಗ ನಿಮ್ಮದಾಗಿದ್ದರೆ ಸಾಕ್ಷಿ ಕೊಡಿ
ತಾಜ್‌ ಮಹಲ್‌ ಜೈಪುರ ರಾಜ ಮನೆತನದ ಆಸ್ತಿ ಎನ್ನುವುದಕ್ಕೆ ಸಾಕ್ಷಿ ಕೊಡಿ ಎಂದು ಬಿಜೆಪಿ ಸಂಸದೆ ದಿವ್ಯಾ ಕುಮಾರಿಗೆ ಶಹಜಹಾನ್‌ ವಂಶಸ್ಥ ಯಾಕೂಬ್‌ ಹಬೀಬುದ್ದೀನ್‌ ತುಸಿ ಸವಾಲು ಹಾಕಿದ್ದಾರೆ. ನಿಮ್ಮಲ್ಲಿ ಒಂದು ತೊಟ್ಟು ರಜಪೂತ್‌ ರಕ್ತವಿದ್ದರೆ ನಿಮ್ಮ ಹೇಳಿಕೆಯನ್ನು ಸಾಬೀತು ಮಾಡಿ ಎಂದು ವೀಡಿಯೊ ಹೇಳಿಕೆಯಲ್ಲಿ ಅವರು ಕೆಣಕಿದ್ದಾರೆ. ಅಷ್ಟು ಮಾತ್ರವಲ್ಲ 14 ಮಂದಿ ರಜಪೂತ್‌ ರಾಣಿಯರನ್ನು ಮೊಘಲ ಸುಲ್ತಾನರು ಮದುವೆ ಯಾಗಿದ್ದರು. ತಮ್ಮ ಅಳಿಯಂದಿರಿಗೆ ರಜಪೂತರು ಜಾಗಗಳನ್ನು ದಾನವಾಗಿ ಕೊಡುವ ಪದ್ಧತಿ ಇಟ್ಟುಕೊಂಡಿದ್ದರು ಎಂದು ಹಬೀಬುದ್ದೀನ್‌ ಹೇಳಿದ್ದಾರೆ. ಗುರುವಾರ ತಾಜ್‌ ಮಹಲ್‌ ಬಗ್ಗೆ ಮಾತನಾಡಿದ್ದ ಜೈಪುರ ರಾಜ ಮನೆತನದ ಭವಿಷ್ಯದ ಯುವರಾಣಿ ದಿವ್ಯಾ ಕುಮಾರಿ, “ತಾಜ್‌ ಮಹಲ್‌ ಇರುವ ಜಾಗ ತಮ್ಮ ಪೂರ್ವಿಕರಿಗೆ ಸೇರಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆ ನನ್ನಲ್ಲಿವೆ’ ಎಂದಿದ್ದರು.

 

 

ಟಾಪ್ ನ್ಯೂಸ್

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

16

ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.