ದೇವಳ ಭೇಟಿಗೆ BJP Certificate ಬೇಕಾಗಿಲ್ಲ;ನಾ ರಾಷ್ಟ್ರವಾದಿ: ರಾಹುಲ್
Team Udayavani, Oct 30, 2018, 7:15 PM IST
ಇಂದೋರ್ : “ದೇವಸ್ಥಾನಗಳಿಗೆ ಭೇಟಿ ಕೊಡುವುದಕ್ಕೆ ನನಗೆ ಬಿಜೆಪಿಯ ಸರ್ಟಿಫಿಕೇಟ್ ಬೇಕಾಗಿಲ್ಲ; ಹಿಂದು ಧರ್ಮವನ್ನು ನಾನು ಬಿಜೆಪಿಯವರಿಗಿಂತಲೂ ಚೆನ್ನಾಗಿ ಅರಿತುಕೊಂಡಿದ್ದೇನೆ; ನಾನು ಪ್ರತಿಯೊಂದು ಧರ್ಮವನ್ನು ಗೌರವಿಸುವ ರಾಷ್ಟ್ರೀಯವಾದಿಯೇ ವಿನಾ ಹಿಂದೂವಾದಿ ಅಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಟು ವಾಕ್ ದಾಳಿ ಎಸಗಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮೊದಲಾದವರು ಆಯಾ ದೇವಸ್ಥಾನಗಳ ಸಂಪ್ರದಾಯ, ಕಟ್ಟುಕಟ್ಟಳೆಗೆ ಅನುಗುಣವಾದ ದಿರಿಸನ್ನು ತೊಟ್ಟು ದೇವಳಗಳನ್ನು ಭೇಟಿ ನೀಡುವಾಗ ಯಾರೂ ಆ ಬಗ್ಗೆ ಮಾತನಾಡುವುದಿಲ್ಲ; ಆದರೆ ಅದೇ ನಾನು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಬಿಜೆಪಿಯವರು ಟೀಕಿಸುತ್ತಾರೆ; ಇದು ಸರಿಯಾ ? ”ಎಂದು ರಾಹುಲ್ ಪ್ರಶ್ನಿಸಿದರು.
“ನಾನು ಪ್ರತಿಯೊಂದು ಧರ್ಮದ ನಾಯಕ; ಆದುದರಿಂದಲೇ ನಾನು ರಾಷ್ಟ್ರೀಯವಾದಿ. ಹಾಗಿರುವುದರಿಂದ ನಾನು ಪ್ರತಿಯೊಂದು ಜಾತಿ, ಭಾಷೆ, ಮತ, ಧರ್ಮ, ವರ್ಗಗಳ ಜನರನ್ನು ಗೌರವಿಸುವವನಾಗಿದ್ದೇನೆ’ ಎಂದು ರಾಹುಲ್ ಹೇಳಿದರು.
ಆಯ್ದ ಪತ್ರಕರ್ತರೊಂದಿಗೆ ಸಂವಾದ ನಡೆಸುತ್ತಿದ್ದ ರಾಹುಲ್, “ನಾನು ದೇವಳಗಳಿಗೆ ಭೇಟಿ ಕೊಟ್ಟರೆ ಹಿಂದೂ ಫ್ಯಾನ್ಸಿ ಡ್ರೆಸ್ ಪ್ರದರ್ಶಿಸುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಅವರು ಮೋದಿ, ಅಮಿತ್ ಶಾ ಬಗ್ಗೆ ಏನೂ ಹೇಳುವುದಿಲ್ಲ; ನಮ್ಮ ದೇಶದ ದೇವಾಲಯಗಳೆಲ್ಲ ಬಿಜೆಪಿ ಮತ್ತು ಆರ್ಎಸ್ಎಸ್ ಗೆ ಸೇರಿದ ಸೊತ್ತುಗಳೇ ? ಮೋದಿ ಮತ್ತು ಅಮಿತ್ ಶಾ ಅವರಿಗೆ ದೇವಸ್ಥಾನ ಭೇಟಿಯ ಗುತ್ತಿಗೆ ಸಿಕ್ಕಿದೆಯಾ ?” ಎಂದು ಪ್ರಶ್ನಿಸಿದರು.
ವಿಧಾನಸಭಾ ಚುನಾವಣೆಯತ್ತ ಮುಖಮಾಡಿರುವ ಮಧ್ಯ ಪ್ರದೇಶಕ್ಕೆ ಎರಡು ದಿನಗಳ ಮಿಂಚಿನ ಭೇಟಿ ನೀಡುತ್ತಿರುವ ರಾಹುಲ್ ಗಾಂಧಿ ಅವರಿಂದು ಉಜ್ಜೆ„ನಿಯ ಸುಪ್ರಸಿದ್ಧ ಮಹಾ ಕಾಲೇಶ್ವರ ದೇವಸ್ಥಾನಕ್ಕೆ ಭೇಟಿಕೊಟ್ಟು ಅಲ್ಲಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.