ಜಮ್ಮು ವಾಯು ಪಡೆ ನಿಲ್ದಾಣದ ಮೇಲೆ ಡ್ರೋನ್ ಬಾಂಬ್ ದಾಳಿ ಶಂಕೆ


Team Udayavani, Jun 27, 2021, 11:20 AM IST

ಜಮ್ಮು ವಾಯು ಪಡೆ ನಿಲ್ದಾಣದ ಮೇಲೆ ಡ್ರೋನ್ ಬಾಂಬ್ ದಾಳಿ ಶಂಕೆ

ಶ್ರೀನಗರ: ಜಮ್ಮು ವಾಯು ಪಡೆ ನಿಲ್ದಾಣದಲ್ಲಿ ನಡೆದ ಎರಡು ಸ್ಫೋಟಗಳ ತನಿಖೆ ಆರಂಭವಾಗಿದೆ. ಮಧ್ಯರಾತ್ರಿ ಐದು ನಿಮಿಷಗಳ ಅಂತರದಲ್ಲಿ ನಡೆದ ಎರಡು ಸ್ಪೋಟಗಳು ಇದೀಗ ಹಲವಾರು ಸಂಶಯಗಳಿಗೆ ಕಾರಣವಾಗಿದೆ.

ರಾತ್ರಿ 1.37ಕ್ಕೆ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದ ಕಟ್ಟಡದ ಛಾವಣಿಯಲ್ಲಿ ಮೊದಲ ಸ್ಫೋಟವಾಗಿದೆ. 1.42ಕ್ಕೆ ಎರಡನೇ ಸ್ಪೋಟ ನಡೆದಿದೆ. ಸ್ಪೋಟದಿಂದಾಗಿ ಯಾವುದೇ ಸಾವು ನೋವು ಹಾನಿ ಸಂಭವಿಸಿಲ್ಲ.

“ಜಮ್ಮು ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಎರಡು ಕಡಿಮೆ ತೀವ್ರತೆಯ ಸ್ಫೋಟಗಳು ವರದಿಯಾಗಿವೆ. ಒಂದು ಕಟ್ಟಡದ ಮೇಲ್ಛಾಣಿಗೆ ಸಣ್ಣ ಹಾನಿಯಾಗಿದೆ. ಇನ್ನೊಂದು ತೆರೆದ ಪ್ರದೇಶದಲ್ಲಿ ಸ್ಫೋಟಗೊಂಡಿದೆ. ಯಾವುದೇ ಸಲಕರಣೆಗಳಿಗೆ ಯಾವುದೇ ಹಾನಿಯಾಗಿಲ್ಲ. ತನಿಖೆ ನಡೆಯುತ್ತಿದೆ “ಎಂದು ಭಾರತೀಯ ವಾಯುಪಡೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಜಮ್ಮು ವಾಯು ಪಡೆ ನಿಲ್ದಾಣದಲ್ಲಿ ಐದು ನಿಮಿಷದ ಅಂತರದಲ್ಲಿ ಎರಡು ಬಾರಿ ಸ್ಫೋಟ!

ವಾಯುಪಡೆಯ ನಿಲ್ದಾಣದ ಹೊರಗೆ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ತನಿಖೆ ನಡೆಯುತ್ತಿದೆ ಮತ್ತು ಈ ಪ್ರಕರಣದಲ್ಲಿ ಭಯೋತ್ಪಾದಕ ಹಿನ್ನೆಲೆ ಸೇರಿದಂತೆ ಎಲ್ಲಾ ಕೋನಗಳಿಂದಲೂ ಪರಿಶೀಲಿಸಲಾಗುತ್ತಿದೆ.

ಸ್ಫೋಟಗಳ ಬಗ್ಗೆ ಮಾಹಿತಿ ತಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಾಯು ಸಿಬ್ಬಂದಿ ಉಪ ಮುಖ್ಯಸ್ಥ ಏರ್ ಮಾರ್ಷಲ್ ಹರ್ಜಿತ್ ಸಿಂಗ್ ಅರೋರಾ ಅವರೊಂದಿಗೆ ಘಟನೆ ಕುರಿತು ಮಾತನಾಡಿದರು.

ಡ್ರೋನ್ ದಾಳಿ ಶಂಕೆ: ವಿಮಾನ ನಿಲ್ದಾಣದ ಉನ್ನತ ಭದ್ರತಾ ವಲಯದೊಳಗೆ ಐಇಡಿ ಪೇಲೋಡ್ ಹಾಕಲು ಡ್ರೋನ್ ಬಳಸಲಾಗಿದೆಯೇ ಎಂದು ಭದ್ರತಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಈ ಡ್ರೋನ್‌ಗಳನ್ನು ರಾಡಾರ್‌ಗಳು ಪತ್ತೆ ಮಾಡುವುದಿಲ್ಲ. ಹಾಗಾಗಿ ರಾಡಾರ್ ಕಣ್ಣು ತಪ್ಪಿಸಿ ಒಳಬಂದಿರುವ ಸಾಧ್ಯತೆಯಿದೆ.

ಇದನ್ನೂ ಓದಿ: ದೇಶದಲ್ಲಿ 50 ಸಾವಿರ ಹೊಸ ಸೋಂಕು ಪ್ರಕರಣಗಳು ಪತ್ತೆ, 57 ಸಾವಿರ ಸೋಂಕಿತರು ಗುಣಮುಖ

ಭಾರತ-ಪಾಕಿಸ್ತಾನ ಗಡಿಯು ಈ ವಾಯುಪಡೆ ನಿಲ್ದಾಣದಿಂದ ಕೇವಲ 14 ಕಿ.ಮೀ ದೂರದಲ್ಲಿದೆ. ಈ ಹಿಂದೆಯೂ ಡ್ರೋನ್‌ಗಳನ್ನು ಬಳಸಿ ಭಾರತದ ಭೂಪ್ರದೇಶದೊಳಗೆ 12 ಕಿ.ಮೀ.ವರೆಗೆ ಶಸ್ತ್ರಾಸ್ತ್ರಗಳನ್ನು ಡ್ರಾಪ್ ಮಾಡಿದ್ದ ಘಟನೆ ನಡೆದಿತ್ತು.

ಪ್ರತ್ಯೇಕ ಘಟನೆಯಲ್ಲಿ ಜಮ್ಮು ಪೊಲೀಸರು ಭಾನುವಾರ ಇಬ್ಬರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದಾರೆ. ಈ ಇಬ್ಬರ ಬಂಧನಕ್ಕೂ, ಸ್ಫೋಟ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.