“ಮುರ್ಮು ರಾಕ್ಷಸಿತತ್ವದ ಪ್ರತೀಕ’ ಕೈ ನಾಯಕರ ಆಕ್ಷೇಪಾರ್ಹ ಹೇಳಿಕೆ
Team Udayavani, Jul 13, 2022, 8:30 PM IST
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದ್ರೌಪದಿ ಮುರ್ಮು, ಭಾರತದ ರಾಕ್ಷಸೀತತ್ವದ ಪ್ರತೀಕ ಪ್ರತೀಕವಾಗಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ವಿವಾದಕ್ಕೀಡಾಗಿದ್ದಾರೆ.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ಅಜಯ್ ಕುಮಾರ್ ಅವರು ದೇಶದ ಆದಿವಾಸಿ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಕುಮಾರ್ ಹೇಳಿದ್ದೇನು?
“ಮುರ್ಮು ಅವರು ಉತ್ತಮ ವ್ಯಕ್ತಿ. ಆದರೆ, ಭಾರತದಲ್ಲಿ ಪರಿಶಿಷ್ಟ ವರ್ಗಗಳ ಪರಿಸ್ಥಿತಿ ಶೋಚನೀಯವಾಗಿದೆ. ಅಂಥ ಶೋಚನೀಯ ಸಮುದಾಯಗಳ ಪ್ರತಿನಿಧಿಯಂತೆ ಕಾಣುವ ಮುರ್ಮು, ಭಾರತದ ರಾಕ್ಷಸೀ ತತ್ವದ ಪ್ರತೀಕವಾಗಿದ್ದಾರೆ. ಆದರೆ, ಅವರನ್ನು ಕೇವಲ ಆದಿವಾಸಿಗಳ ಪ್ರತೀಕ ಎನ್ನುವಂತೆ ಬಿಂಬಿಸುವುದು ಸರಿಯಲ್ಲ’ ಎಂದಿದ್ದಾರೆ.
ಬಿಜೆಪಿ ತಿರುಗೇಟು
ಕುಮಾರ್ರವರ ಹೇಳಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಬಿಜೆಪಿಯ ಅಮಿತ್ ಮಾಳವಿಯ, ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯನ್ನಾಗಿ ಮುರ್ಮು ಅವರ ಹೆಸರನ್ನು ಮೋದಿ ಘೋಷಿಸಿದ್ದು, ಆದಿವಾಸಿ ಸಮುದಾಯಗಳ ಸಬಲೀಕರಣಕ್ಕೆ ಇಟ್ಟ ಹೆಜ್ಜೆಯಾಗಿದೆ. ಹಾಗಿರುವಾಗ, ಮುರ್ಮು ಅವರನ್ನು ರಕ್ಕಸ ತತ್ವದ ಪ್ರತೀಕ ಎಂದಿರುವುದು ಆಕ್ಷೇಪಾರ್ಹ. ಕುಮಾರ್ ಅವರು ಕೂಡಲೇ ಆದಿವಾಸಿ ಸಮುದಾಯದ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.