Droupadi Murmu; ಸಂತ್ರಸ್ತೆಯರಿಗೆ ಸಮಾಜದ ಬೆಂಬಲ ಸಿಗುತ್ತಿಲ್ಲ: ರಾಷ್ಟ್ರಪತಿ ತೀವ್ರ ಕಳವಳ

ಅಪರಾಧಿಗಳು ಮುಕ್ತವಾಗಿ ತಿರುಗುತ್ತಿದ್ದಾರೆ, ಬಲಿಪಶುಗಳು ಭಯದಲ್ಲಿ ಬದುಕುತ್ತಿದ್ದಾರೆ..

Team Udayavani, Sep 1, 2024, 9:17 PM IST

1-adsasd

ಹೊಸದಿಲ್ಲಿ: ಅಪರಾಧಗಳಿಂದ ಸಂತ್ರಸ್ತರಾಗಿ ಬದುಕುಳಿದ ಮಹಿಳೆಯರಿಗೆ ಸಮಾಜದ ಬೆಂಬಲದ ಕೊರತೆಯ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು( President Droupadi Murmu)ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ರವಿವಾರ(ಸೆ 1) ಸುಪ್ರೀಂ ಕೋರ್ಟ್(Supreme Court) ಆಯೋಜಿಸಿದ ಜಿಲ್ಲಾ ನ್ಯಾಯಾಂಗದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ‘ನಮ್ಮ ನ್ಯಾಯಾಂಗದ ಮುಂದೆ ಅನೇಕ ಸವಾಲುಗಳಿವೆ, ಅದನ್ನು ಪರಿಹರಿಸಲು ಎಲ್ಲಾ ಮಧ್ಯಸ್ಥಗಾರರ ಸಂಘಟಿತ ಪ್ರಯತ್ನಗಳ ಅಗತ್ಯವಿದೆ’ ಎಂದರು.

ಕೋಲ್ಕತಾ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ,ಮಲಯಾಳಂ ಚಿತ್ರರಂಗದಲ್ಲಿ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ, ದೇಶದ ವಿವಿಧೆಡೆ ಅತ್ಯಾಚಾರದ ಹತ್ತಾರು ಪ್ರಕರಣಗಳ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ವೇಳೆಯಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿಕೆ ನೀಡಿದ್ದಾರೆ.

‘ಭಾರತದಲ್ಲಿ ಮಹಿಳೆಯರು ಮತ್ತು ಹುಡುಗಿಯರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಕರೆಗಳನ್ನು ಹುಟ್ಟುಹಾಕಿದೆ’ ಎಂದು ಹೇಳಿದ್ದಾರೆ.

“ಅಪರಾಧ ಮಾಡಿದ ನಂತರವೂ ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುತ್ತಿರುವುದು ನಮ್ಮ ಸಾಮಾಜಿಕ ಜೀವನದ ದುಃಖದ ವಿಚಾರವಾಗಿದೆ, ಅವರ ಅಪರಾಧಗಳಿಗೆ ಬಲಿಪಶುವಾದವರು ತಮ್ಮ ಆಲೋಚನೆಗಳು ಅನೇಕ ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುತ್ತಾರೆ. ಸಂತ್ರಸ್ತ ಮಹಿಳೆಯರ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ. ಏಕೆಂದರೆ ಸಮಾಜದ ಜನರು ಸಹ ಅವರನ್ನು ಬೆಂಬಲಿಸುವುದಿಲ್ಲ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಹೊಸ ಧ್ವಜ, ಲಾಂಛನ ಅನಾವರಣ
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹೊಸ ಧ್ವಜ ಮತ್ತು ಲಾಂಛನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರವಿವಾರ ಅನಾವರಣಗೊಳಿಸಿದರು.

ಹೊಸ ಧ್ವಜ ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸಲಿದ್ದು, ಧ್ವಜದಲ್ಲಿ ಸಂವಿಧಾನ ಪುಸ್ತಕ, ಅಶೋಕ ಚಕ್ರ ಮತ್ತು ಸುಪ್ರೀಂ ಕೋರ್ಟ್‌ನ ಹಳೆಯ ಕಟ್ಟಡಗಳನ್ನು ಚಿತ್ರಿಸಲಾಗಿದೆ.

1937ರ ಅ.1ರಂದು ಭಾರತದಲ್ಲಿ ಸುಪ್ರೀಂ ಕೋರ್ಟನ್ನು ಬ್ರಿಟಿಷರು ಸ್ಥಾಪನೆ ಮಾಡಿದರು. ಸ್ವಾತಂತ್ರ್ಯದ ಬಳಿಕ 1950ರಲ್ಲಿ ಸಂವಿಧಾನದ ಅನ್ವಯ ಇದನ್ನು ಅಧಿಕೃತಗೊಳಿಸಲಾಯಿತು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.