Dussehra: ಜಾತೀಯತೆ, ಪ್ರಾದೇಶಿಕತೆಯನ್ನು ಬೇರು ಸಮೇತ ಕಿತ್ತೊಗೆಯಿರಿ: ಪ್ರಧಾನಿ ಮೋದಿ ಕರೆ
10 ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯ
Team Udayavani, Oct 24, 2023, 8:39 PM IST
ಹೊಸದಿಲ್ಲಿ: ಜಾತೀಯತೆ ಮತ್ತು ಪ್ರಾದೇಶಿಕತೆಯಂತಹ ಸಾಮಾಜಿಕ ವಿರೂಪಗಳನ್ನು ಬೇರುಸಹಿತ ಕಿತ್ತೊಗೆಯುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದ್ದಾರೆ.
ದೆಹಲಿಯ ದ್ವಾರಕಾದ ರಾಮ್ ಲೀಲಾ ಮೈದಾನದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಕನಿಷ್ಠ ಒಂದು ಬಡ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಉನ್ನತೀಕರಿಸುವುದು ಸೇರಿದಂತೆ 10 ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದರು.
ಇಂದು, ‘ರಾವಣ ದಹನ’ ಕೇವಲ ಪ್ರತಿಕೃತಿ ಮಾತ್ರ ದಹನವಾಗಬಾರದು ಆದರೆ ಜಾತಿವಾದ ಮತ್ತು ಪ್ರಾದೇಶಿಕತೆಯ ಹೆಸರಿನಲ್ಲಿ ತಾಯಿ ಭಾರತಿಯನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ದಹನವೂ ಆಗಿರಬೇಕು” ಎಂದರು.
ರಾಮ ಮಂದಿರದ ಕುರಿತು ಮಾತನಾಡಿ “ದೀರ್ಘಕಾಲದ ನಂತರ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಭಗವಾನ್ ರಾಮನ ಮಂದಿರವನ್ನು ನಿರ್ಮಿಸುತ್ತಿರುವುದನ್ನು ನೋಡುವ ಭಾಗ್ಯವಿದೆ. ಇದು ನಮ್ಮ ತಾಳ್ಮೆಯ ವಿಜಯದ ಸಂಕೇತವಾಗಿದೆ” ಎಂದರು.
ಇಸ್ರೋದ ಚಂದ್ರನ ಚಂದ್ರನ ಮೇಲ್ಮೈಯಲ್ಲಿ ಇಳಿದ ಯಶಸ್ವಿ ಪ್ರಯತ್ನವನ್ನು ಶ್ಲಾಘಿಸಿ”ನಾವು ಚಂದ್ರನನ್ನು ತಲುಪಿದ್ದೇವೆ. ನಾವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದೇವೆ. ನಾವು ಕೆಲವೇ ವಾರಗಳ ಹಿಂದೆ ಹೊಸ ಸಂಸತ್ತಿನ ಕಟ್ಟಡವನ್ನು ಪ್ರವೇಶಿಸಿದ್ದೇವೆ. ಮಹಿಳಾ ಶಕ್ತಿಗೆ ಪ್ರಾತಿನಿಧ್ಯ ನೀಡಲು, ಸಂಸತ್ತು ನಾರಿ ಶಕ್ತಿ ವಂದನ್ ಅಧಿನಿಯಮವ ನ್ನು ಅಂಗೀಕರಿಸಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Scheme: ದಂಡ ಸಹಿತ ಪಾನ್-ಆಧಾರ್ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!
RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.