Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ
Team Udayavani, Oct 8, 2024, 8:49 AM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಕಾರ್ಯ ಮಂಗಳವಾರ (ಅ.08) ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಜಮ್ಮು-ಕಾಶ್ಮೀರದ ಎಲ್ಲಾ 20 ಮತಎಣಿಕೆ ಕೇಂದ್ರಕ್ಕೂ 3ಹಂತದ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಆರಂಭಿಕ ಮಾಹಿತಿ ಪ್ರಕಾರ ಹರ್ಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡುಬಂದಿದೆ.
ಹರ್ಯಾಣದಲ್ಲಿ ಕಾಂಗ್ರೆಸ್ 26 ಸ್ಥಾನಗಳಿಂದ ಮುನ್ನಡೆ ಕಾಯ್ದುಕೊಂಡರೆ ಬಿಜೆಪಿ 20 ಸ್ಥಾನಗಳಿಂದ ಪೈಪೋಟಿ ನೀಡುತ್ತಿದೆ, ಅದೇ ರೀತಿ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ 16 ಸ್ಥಾನಗಳಿಂದ ಪಡೆದುಕೊಂಡರೆ ಕಾಂಗ್ರೆಸ್ 18 ಸ್ಥಾನಗಳಿಂದ ಪೈಪೋಟಿ ನೀಡುತ್ತಿದೆ.
ಜಮ್ಮು-ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶ್ರೀನಗರದ ಷೇರ್ ಐ ಕಾಶ್ಮೀರ್ ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ ( SKICC) ನಲ್ಲಿ ನಡೆಯುತ್ತಿದೆ ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಶೇಷವೆಂದರೆ ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ.
ಮೊದಲಿಗೆ ಅಂಚೆ ಮತಗಣ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಇದಾದ ಬಳಿಕ ಇವಿಎಂ ಮತಎಣಿಕೆ ಕಾರ್ಯ ನಡೆಯಲಿದೆ, ಒಟ್ಟಾರೆ ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
Haryana: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ಫೋಗಾಟ್ ಗೆ ಜಯ, ಬಿಜೆಪಿಯ ಯೋಗೇಶ್ ಗೆ ಸೋಲು
Haryana Result: ಬಿಜೆಪಿಗೆ 3ನೇ ಬಾರಿ ಗದ್ದುಗೆ: ಚುನಾವಣ ಆಯೋಗಕ್ಕೆ ಕಾಂಗ್ರೆಸ್ ದೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.