![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 22, 2023, 6:20 AM IST
ಹೊಸದಿಲ್ಲಿ: ರಾಜಕಾರಣಿಗಳು, ಅಭ್ಯರ್ಥಿಗಳು ಅಂಗವಿಕಲರಿಗೆ (ಶಾರೀರಿಕ ನ್ಯೂನತೆ ಉಳ್ಳವರು) ಅವಮಾನ ಉಂಟಾಗುವಂತಹ ಪದ/ವಾಕ್ಯಗಳನ್ನು ಸಾರ್ವಜನಿಕ ಭಾಷಣಗಳಲ್ಲಿ ಬಳಸಬಾರದು. ಹಾಗೊಂದು ವೇಳೆ ಬಳಸಿದರೆ ಅದನ್ನು ಅಂಗವಿಕಲರಿಗೆ ಮಾಡಿದ ಅವಮಾನ ಎಂದು ಪರಿಗಣಿಸಲಾಗುವುದು ಎಂದು ಚುನಾವಣ ಆಯೋಗ ಎಚ್ಚರಿಕೆ ನೀಡಿದೆ.
ದೇಶದ ಎಲ್ಲ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಗೆ ಈ ಮೂಲಕ ಸಭ್ಯ ಭಾಷೆಯನ್ನು ಬಳಸಬೇಕೆಂದು ಎಚ್ಚರಿಕೆ ನೀಡಿದೆ. ಒಂದು ವೇಳೆ ಬಳಸಿದರೆ “ಅಂಗವೈಕಲ್ಯಗಳನ್ನುಳ್ಳ ವ್ಯಕ್ತಿಗಳ ಹಕ್ಕು ಕಾಯ್ದೆಯ 92ರ ವಿಧಿಯನ್ವಯ’ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ತಿಳಿಸಿದೆ.
ರಾಜಕೀಯ ಪಕ್ಷಗಳು ಅಂಗವಿಕಲರನ್ನು ಪಕ್ಷದ ಸದಸ್ಯರು, ಕಾರ್ಯಕರ್ತರನ್ನಾಗಿ ತೆಗೆದುಕೊಳ್ಳಬೇಕು. ಆ ಮೂಲಕ ಅವರ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೆಗೆದು ಹಾಕಬೇಕು, ಅವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಎಲ್ಲ ಪ್ರಚಾರ ಸಾಮಗ್ರಿಗಳನ್ನು (ಭಾಷ ಣಗಳು, ಸಾಮಾಜಿಕ ತಾಣಗಳಲ್ಲಿನ ಪೋಸ್ಟ್ ಗಳು, ಜಾಹೀರಾತು, ಮಾಧ್ಯಮ ಪ್ರಕಟನೆ ಗಳು) ಮೊದಲು ಆಂತರಿಕ ಪರಿಶೀಲನೆಗೊಳಪಡಿಸಬೇಕು ಎಂದು ಆಯೋಗ ಹೇಳಿದೆ.
ಯಾವ್ಯಾವ ಪದಗಳಿಗೆ ನಿರ್ಬಂಧ?: ಎಲ್ಲ ಕಡೆ ಸಾಮಾನ್ಯವಾಗಿ ಬಳಸುವಂತಹ ಮೂಗ, ಹುಚ್ಚ, ಕುರುಡ, ಕಿವುಡ, ಕುಂಟ… ಈ ರೀತಿಯ ಪದಗಳನ್ನು ಬಳಸ ಬಾರದೆಂದು ಹೇಳಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.