![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2023, 6:35 AM IST
ನವದೆಹಲಿ: “ಉದ್ಯೋಗಕ್ಕಾಗಿ ಜಮೀನು’ ಹಗರಣ ಸಂಬಂಧ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಸದಸ್ಯರು ಹಾಗೂ ಪಕ್ಷದ ನಾಯಕರ ಮನೆಗಳಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯ ಸರಣಿ ಶೋಧಕಾರ್ಯ ಕೈಗೊಂಡಿದೆ. ಬಿಹಾರದ ಹಲವು ಪ್ರದೇಶಗಳಲ್ಲಿ ಮಾತ್ರವಲ್ಲದೇ, ಇತರೆ ರಾಜ್ಯಗಳಲ್ಲೂ ಇ.ಡಿ ದಾಳಿ ನಡೆದಿದೆ.
ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಅವರ ದೆಹಲಿಯ ನಿವಾಸ, ಲಾಲು ಪುತ್ರಿಯರಾದ ರಾಗಿಣಿ ಯಾದವ್, ಚಂದಾ ಯಾದವ್ ಮತ್ತು ಹೇಮಾ ಯಾದವ್ ಅವರಿಗೆ ಸಂಬಂಧಪಟ್ಟ ಮನೆಗಳು, ಆರ್ಜೆಡಿ ಮಾಜಿ ಶಾಸಕ ಅಬು ದೋಜಾನಾ ಅವರ ಮನೆ ಮಾತ್ರವಲ್ಲದೇ ಪಾಟ್ನಾ, ಪುಲ್ವಾರಿ ಷರೀಫ್, ದೆಹಲಿ-ಎನ್ಸಿಆರ್, ರಾಂಚಿ, ಮುಂಬೈ ಸೇರಿದಂತೆ ವಿವಿಧೆಡೆ ಇ.ಡಿ. ಅಧಿಕಾರಿಗಳು ಶೋಧಕಾರ್ಯ ನಡೆಸಿ, ಕಾಗದಪತ್ರಗಳನ್ನು ಪರಿಶೀಲಿಸಿದ್ದಾರೆ.
ದಾಳಿ ಬಗ್ಗೆ ಪ್ರತಿಕ್ರಿಯಿಸಿದ ತೇಜಸ್ವಿ ಯಾದವ್, “ನಾವು ಫ್ಯಾಸಿಸ್ಟ್ಗಳು, ಗಲಭೆಕೋರರ ಮುಂದೆ ಮಂಡಿಯೂರಲಿಲ್ಲ ಎಂಬ ಏಕೈಕ ಕಾರಣ ನಮ್ಮ ಕುಟುಂಬವನ್ನು ಹಿಂಸಿಸಲಾಗುತ್ತಿದೆ. ನನ್ನ ಪತ್ನಿ ತುಂಬು ಗರ್ಭಿಣಿ. ಈ ಸಮಯದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ’ ಎಂದಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.