AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..
ಸಂಸದ ಅರೋರಾ ಅವರ ಮನೆಗಳು ಸೇರಿದಂತೆ ಸುಮಾರು 16-17 ಸ್ಥಳಗಳಲ್ಲಿ ಶೋಧ!!.. ಕಿಡಿ ಕಾರಿದ ಆಮ್ ಆದ್ಮಿ ಪಕ್ಷ
Team Udayavani, Oct 7, 2024, 6:48 PM IST
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಸಂಸದ ಸಂಜೀವ್ ಅರೋರಾ ಅವರನ್ನು ಗುರಿಯಾಗಿಸಿ ಸೋಮವಾರ(ಅ7) ಜಾರಿ ನಿರ್ದೇಶನಾಲಯ (ED) ಹಲವು ಕಡೆ ದಾಳಿ ನಡೆಸಿದ್ದು ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದೆ.
ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಕಿಡಿ ಕಾರಿದ್ದು, ಇಂದು, ಆಮ್ ಆದ್ಮಿ ಪಕ್ಷ, ಅರವಿಂದ್ ಕೇಜ್ರಿವಾಲ್ ಮತ್ತು ನಮ್ಮ ನಾಯಕರನ್ನು ನಾಶಮಾಡುವ ಪ್ರಯತ್ನದಲ್ಲಿ, ಪ್ರಧಾನ ಮಂತ್ರಿಗಳ ಮುದ್ದಿನ ಸಂಸ್ಥೆ ಇಡಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಅವರ ಮನೆಯ ಮೇಲೆ ದಾಳಿ ಮಾಡಿದೆ. ಮೋದಿ ಅವರು ತನಿಖಾ ಸಂಸ್ಥೆಗಳನ್ನು ರಾಜಕೀಯ ಸಾಧನಗಳಾಗಿ ಬಳಸುತ್ತಿದ್ದಾರೆ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ಸಾಧ್ಯವಾಗದ ಕಾರಣ ಇಂತಹ ಕ್ರಮಗಳನ್ನು ಅನುಸರಿಸುತ್ತಿದ್ದಾರೆ” ಎಂದು ಕಿಡಿ ಕಾರಿದರು.
61 ರ ಹರೆಯದ ಅರೋರಾ ಮತ್ತು ಇತರರ ವಿರುದ್ಧ ಭೂ “ವಂಚನೆ” ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯಲ್ಲಿ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಲೂಧಿಯಾನ ಮತ್ತು ಗುರುಗ್ರಾಮ್ನಲ್ಲಿರುವ ಸಂಸದ ಅರೋರಾ ಅವರ ಮನೆಗಳು ಸೇರಿದಂತೆ ಸುಮಾರು 16-17 ಸ್ಥಳಗಳನ್ನು ಶೋಧಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಅರೋರಾ ಅವರು ತಮ್ಮ ಕಂಪನಿಯ ಹೆಸರಿನಲ್ಲಿ “ಕಾನೂನುಬಾಹಿರ” ರೀತಿಯಲ್ಲಿ ಕೈಗಾರಿಕಾ ಪ್ಲಾಟ್ ಅನ್ನು ವರ್ಗಾಯಿಸಿರುವ ಆರೋಪ ಕೇಳಿಬಂದಿದೆ. ಏತನ್ಮಧ್ಯೆ, ಅರೋರಾ ಅವರು ಎಕ್ಸ್ ಪೋಸ್ಟ್ನಲ್ಲಿ ದಾಳಿ ಹಿಂದಿನ ಕಾರಣದ ಬಗ್ಗೆ ನನಗೆ ಖಾತ್ರಿಯಿಲ್ಲ, ಆದರೆ ಏಜೆನ್ಸಿಯೊಂದಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ
Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ
Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.