ನಟ ಕಮಲಹಾಸನ್ ಗುರಿಯಾಗಿರಿಸಿಕೊಂಡು ಮೊಟ್ಟೆ,ಕಲ್ಲು ತೂರಾಟ
Team Udayavani, May 17, 2019, 8:50 AM IST
ಚೆನ್ನೈ: ಖ್ಯಾತ ನಟ, ಮಕ್ಕಳ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲಹಾಸನ್ ಅವರನ್ನು ಗುರಿಯಾಗಿರಿಸಿಕೊಂಡು ಕಲ್ಲು ಮತ್ತು ಮೊಟ್ಟೆಗಳನ್ನು ತೂರಲಾಗಿದೆ.
ಗುರುವಾರ ರಾತ್ರಿ ಅರವಾಕುರಿಚಿಯಲ್ಲಿ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ಮತ್ತು ಮೊಟ್ಟೆಗಳನ್ನು ತೂರಿದ್ದಾರೆ.
ಕಲ್ಲು ಮತ್ತು ಮೊಟ್ಟೆಗಳು ಯಾರೊಬ್ಬರಿಗೂ ತಗುಲಿಲ್ಲ. ಕಮಲಹಾಸನ್ ಅವರಿಗೆ ಭದ್ರತಾ ಸಿಬಂದಿ ರಕ್ಷಣೆ ನೀಡಿದರು.
ಘಟನೆ ಬಳಿಕ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಬಂಧಿಸುವುದಾಗಿ ತಿಳಿಸಿದ್ದಾರೆ.
ಬುಧವಾರಸಂಜೆಯೂ ಕಮಲಹಾಸನ್ ಅವರನ್ನಗುರಿಯಾಗಿರಿಸಿಕೊಂಡು ಚಪ್ಪಲಿಯನ್ನು ತೂರಲಾಗಿತ್ತು.
ಅಭಿಮಾನಿಗಳು ಯಾರು ಉದ್ರಿಕ್ತರಾಗಿ ಶಾಂತಿ ಕದಡಬಾರದು ಎಂದು ಕಮಲಹಾಸನ್ ಮನವಿ ಮಾಡಿದ್ದಾರೆ.
ಕಮಲಹಾಸನ್ ಅವರು ನಾಥುರಾಮ್ ಗೋಡ್ಸೆ ಮೊದಲ ಹಿಂದು ಉಗ್ರ ಎಂಬ ಹೇಳಿಕೆ ನೀಡಿದ್ದರು. ಆ ಬಳಿಕ ಆಕ್ರೋಶ ವ್ಯಕ್ತವಾಗಿತ್ತು.
ಬಂಧನವಾದರೂ ಭಯ ಪಡುವುದಿಲ್ಲ!
ತಮ್ಮ ಮೇಲಾದ ದಾಳಿಯ ಕುರಿತು ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಡಿದ ಕಮಲಹಾಸನ್ , ನಾನು ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ. ಉಗ್ರರಿಗೆ ಯಾವುದೇ ಧರ್ಮವಿಲ್ಲ. ಪ್ರತೀ ಧರ್ಮದಲ್ಲೂ ಅದರದೇ ಉಗ್ರತ್ವ ಹೊಂದಿರುವುದನ್ನು ಇತಿಹಾಸ ತೋರಿಸಿಕೊಡುತ್ತದೆ. ಯಾರೂ ಅವರನ್ನು ಪವಿತ್ರ ಎನ್ನುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.