Maharashtra;16 ಶಾಸಕರು ಅನರ್ಹರಾದರೂ ಶಿಂಧೆ ಸರ್ಕಾರ ಉರುಳಲ್ಲ..: ಅಜಿತ್ ಪವಾರ್
Team Udayavani, May 16, 2023, 10:50 AM IST
ಮುಂಬೈ: ಒಂದು ವೇಳೆ 16 ಮಂದಿ ಶಾಸಕರು ಅನರ್ಹರಾದರೂ ಏಕನಾಥ ಶಿಂಧೆ ಸರ್ಕಾರವು ಉರುಳುವುದಿಲ್ಲ ಎಂದು ಎನ್ ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ.
ಶಿಂಧೆ ಪಾಳೆಯದ 16 ಶಾಸಕರ ಅನರ್ಹತೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಕೋರಿ ಶಿವಸೇನೆಯ (ಯುಬಿಟಿ) ನಿಯೋಗವು ಮಹಾರಾಷ್ಟ್ರ ಉಪ ಸ್ಪೀಕರ್ ಗೆ 79 ಪುಟಗಳ ಪತ್ರವನ್ನು ಹಸ್ತಾಂತರಿಸಿದೆ. ಇದರ ಹಿನ್ನೆಲೆಯಲ್ಲಿ ಪವಾರ್ ಈ ಹೇಳಿಕೆ ನೀಡಿದ್ದಾರೆ.
“ಒಂದು ವೇಳೆ 16 ಶಾಸಕರು ಅನರ್ಹರಾದರೂ ಶಿಂಧೆ- ಫಡ್ನವೀಸ್ ಸರ್ಕಾರವು ಉರುಳುವುದಿಲ್ಲ. ಈ ಸರ್ಕಾರಕ್ಕೆ ಯಾವುದೇ ಭಯವಿಲ್ಲ. 288 ಸದಸ್ಯಬಲದ ವಿಧಾನಸಭೆಯಲ್ಲಿ 16 ಮಂದಿ ಶಾಸಕರ ಅನರ್ಹತೆಯಿಂದ ಸರ್ಕಾರಕ್ಕೆ ನಷ್ಟವಿಲ್ಲ” ಎಂದಿದ್ದಾರೆ.
ಶಿಂಧೆ ಪಾಳಯದ 16 ಶಾಸಕರ ಅನರ್ಹತೆಯನ್ನು ಸ್ಪೀಕರ್ ತೀರ್ಪು ನೀಡಬಹುದು ಎಂದು ಸುಪ್ರೀಂ ಕೋರ್ಟ್ನ ಆದೇಶದ ನಂತರ ಠಾಕ್ರೆ ಬಣದ ಸೇನೆಯ ನಿಯೋಗವು ಸ್ಪೀಕರ್ಗೆ ಪತ್ರವನ್ನು ಸಲ್ಲಿಸಿದೆ ಎಂದು ಶಿವಸೇನೆಯ (ಠಾಕ್ರೆ) ಸಚೇತಕ ಸುನಿಲ್ ಪ್ರಭು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.