Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

70 ವರ್ಷ ಬಾಂಬ್‌ ಹಿಡಿದಿದ್ದ ಪಾಕ್‌ ಕೈಯ್ಯಲ್ಲಿ ಈಗ ಭಿಕ್ಷಾಪಾತ್ರೆ

Team Udayavani, May 19, 2024, 1:00 AM IST

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

ಚಂಡೀಗಢ: ಎಪ್ಪತ್ತು ವರ್ಷಗಳ ಕಾಲ ಕೈಯಲ್ಲಿ ಬಾಂಬ್‌ ಹಿಡಿದು ಭಾರತಕ್ಕೆ ತೊಂದರೆ ನೀಡು ತ್ತಿದ್ದ ಪಾಕಿಸ್ಥಾನವು ಇಂದು ಕೈಯಲ್ಲಿ ಭಿಕ್ಷಾ ಪಾತ್ರೆಯನ್ನು ಹಿಡಿಯುವಂತಾ ಗಿದೆ. ದೇಶದಲ್ಲಿ ಬಲಿಷ್ಠ ಹಾಗೂ ಸದೃಢ ಸರಕಾರ ಇದ್ದಾಗ ಮಾತ್ರವೇ ಶತ್ರುಗಳು ಈ ರೀತಿ ನಡುಗುತ್ತಾರೆ, ನಮಗೆ ಸವಾಲೆಸೆಯುವ ಮುನ್ನ 100 ಬಾರಿ ಯೋಚಿ ಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹರಿಯಾಣದಲ್ಲಿ ಶನಿವಾರ ಚುನಾವಣ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಪಾಕಿಸ್ಥಾನಕ್ಕೆ ಈ ರೀತಿ ಕುಟುಕಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ 4 ಹಂತದ ಲೋಕಸಭೆ ಚುನಾವಣೆಗಳು ಈಗಾಗಲೇ ಮುಗಿದಿದ್ದು, ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಒಕ್ಕೂಟ ಸಂಪೂರ್ಣವಾಗಿ ನೆಲಕಚ್ಚಿವೆ. ಜೂ. 4ಕ್ಕೆ ಇನ್ನು 17 ದಿನ ಬಾಕಿ ಇದ್ದು, ಆ ಬಳಿಕ ಕೇಂದ್ರದಲ್ಲಿ ಮತ್ತೆ ಪ್ರಬಲ ಎನ್‌ಡಿಎ ಸರಕಾರ ರಚನೆಯಾಗಲಿದೆ ಎಂದಿದ್ದಾರೆ. ಪಾಕಿಸ್ಥಾನದ ವಿಚಾರ ಪ್ರಸ್ತಾವಿಸಿ ದೇಶದಲ್ಲಿ ಪ್ರಬಲ ಸರಕಾರ ನಿರ್ಮಾಣದ ಅಗತ್ಯವನ್ನು ಮೋದಿ ಒತ್ತಿ ಹೇಳಿದ್ದಾರೆ. ದೇಶದಲ್ಲಿ ಐಎನ್‌ಡಿಐಎ ಒಕ್ಕೂಟ ಪ್ರಯೋಗಿಸುತ್ತಿರುವ ತಂತ್ರಗಳನ್ನು ಸಾರ್ವಜನಿಕರೇ ಸೋಲಿಸುತ್ತಿದ್ದಾರೆ. ವಿಶೇಷವಾಗಿ ಹರಿಯಾಣದ ಜನತೆಗೆ ದೇಶವಿರೋಧಿಗಳನ್ನು ಗುರುತಿಸುವ ಸಾಮರ್ಥ್ಯವಿದೆ. ಈ ರಾಜ್ಯದ ನರನಾಡಿಗಳಲ್ಲೂ ದೇಶಭಕ್ತಿ ತುಂಬಿದೆ ಎಂದಿದ್ದಾರೆ. ಇದೇ ವೇಳೆ ಇಲ್ಲಿನ ಪ್ರತೀ ಮನೆಯೂ “ಫಿರ್‌ ಏಕ್‌ ಬಾರ್‌’ ಎನ್ನುತ್ತಿವೆ ಎಂದು ಪ್ರಧಾನಿ ಹೇಳುತ್ತಿದ್ದಂತೆ ಜನಸಮೂಹ “ಮೋದಿ ಸರಕಾರ್‌’ ಎಂದು ಘೋಷಣೆ ಮೊಳಗಿಸುವ ಮೂಲಕ ಪ್ರಧಾನಿಗೆ ಬೆಂಬಲ ವ್ಯಕ್ತಪಡಿಸಿತು.

ಭದ್ರತೆ ವಿಚಾರದಲ್ಲೂ
ಕಾಂಗ್ರೆಸ್‌ ಹಗರಣ
ದೇಶದಲ್ಲಿ ಕಾಂಗ್ರೆಸ್‌ ನಡೆಸಿದ ಮೊದಲ ಹಗರಣವೇ ಭದ್ರತ ಪಡೆಗಳಿಗೆ ಸಂಬಂಧಿಸಿದ್ದಾಗಿದೆ. ಅಧಿಕಾರದಲ್ಲಿ ಇರುವವರೆಗೂ ಇದೇ ಪ್ರವೃತ್ತಿಯನ್ನು ಕಾಂಗ್ರೆಸ್‌ ಮುಂದುವರಿಸಿತು. ಬೋಫೋರ್ಸ್‌, ಸಬ್‌ಮರೀನ್‌, ಹೆಲಿಕಾಪ್ಟರ್‌ ಹೀಗೆ ಸಾಲು ಸಾಲು ಹಗರಣ ನಡೆಸಿ ಭದ್ರತ ಪಡೆಗಳನ್ನು ಕಾಂಗ್ರೆಸ್‌ ದುರ್ಬಲಗೊಳಿಸಿತ್ತು ಎಂದು ಪ್ರಧಾನಿ ಆರೋಪಿಸಿದ್ದಾರೆ. ವಿದೇಶಗಳಿಂದ ಶಸ್ತ್ರಾಸ್ತ್ರ ಆಮದು ಹೆಸರಿನಲ್ಲಿ ಹಣ ದೋಚುವುದಕ್ಕಾಗಿ ಕಾಂಗ್ರೆಸ್‌ ಇಂಥ ಕೃತ್ಯಗಳನ್ನು ಎಸಗಿದೆ. ಆದರೆ ನಾವು ಭಾರತದ ಸಶಸ್ತ್ರ ಪಡೆಗಳನ್ನು ಆತ್ಮನಿರ್ಭರಗೊಳಿಸಲು ಯೋಜನೆ ರೂಪಿಸಿದೆವು ಎಂದಿದ್ದಾರೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.