ಪಂಚರಾಜ್ಯಗಳ ಚುನಾವಣೆ: ಅಭ್ಯರ್ಥಿಗಳ ಆಯ್ಕೆ ಕಸರತ್ತು


Team Udayavani, Jan 14, 2022, 7:00 AM IST

thumb 2

ಲಕ್ನೋ ಸೆಂಟ್ರಲ್‌ನಿಂದ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿ ಸದಾಫ್ ಜಫ‌ರ್‌.

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಎಲ್ಲ ಪಕ್ಷಗಳೂ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವಲ್ಲಿ ನಿರತವಾಗಿವೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉಪಸ್ಥಿತಿಯಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಸಿ ಉತ್ತರಪ್ರದೇಶದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪರಾಮರ್ಶೆ ನಡೆಸಿದೆ. ಮತ್ತೂಂದೆಡೆ, ಕಾಂಗ್ರೆಸ್‌ 125 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ವಿಶೇಷವೆಂದರೆ, ಕಾಂಗ್ರೆಸ್‌ನ 125 ಅಭ್ಯರ್ಥಿಗಳ ಪೈಕಿ 50 ಮಂದಿ ಮಹಿಳೆಯರಿಗೆ ಟಿಕೆಟ್‌ ನೀಡಲಾಗಿದೆ. ಅದರಲ್ಲೂ ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್‌ ಅವರನ್ನು ಉನ್ನಾವ್‌ ಕ್ಷೇತ್ರದಿಂದಲೇ ಕಾಂಗ್ರೆಸ್‌ ಕಣಕ್ಕಿಳಿಸಿದೆ. ಆಶಾ ಕಾರ್ಯಕರ್ತೆಯರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಅವರಿಗೆ ಶಹಜಹಾನ್‌ಪುರದ ಟಿಕೆಟ್‌ ನೀಡಲಾಗಿದೆ. ಸಿಎಎ ವಿರೋಧಿ ಹೋರಾಟಗಾರ್ತಿ  ಸದಾಫ್ ಜಫ‌ರ್‌, ಬುಡಕಟ್ಟು ನಾಯಕ ರಾಮ್‌ರಾಜ್‌ ಗೋಂಡ್‌ ಅವರೂ ಕಾಂಗ್ರೆಸ್‌ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ನಾಯಕಿ ಪ್ರಿಯಾಂಕಾ ವಾದ್ರಾ, “ಶೇ.40 ಅಭ್ಯರ್ಥಿಗಳು ಮಹಿಳೆಯರಾಗಿದ್ದರೆ, ಶೇ.40 ಅಭ್ಯರ್ಥಿಗಳು ಯುವಜನರಾಗಿದ್ದಾರೆ. ಉತ್ತರಪ್ರದೇಶದಲ್ಲಿ ನ್ಯಾಯಕ್ಕಾಗಿ ಹೋರಾಡಿದವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ’ ಎಂದು ಹೇಳಿದ್ದಾರೆ.

ಬಿಜೆಪಿ ಪಟ್ಟಿ ಅಂತಿಮ: ಈ ನಡುವೆ, ಬಿಜೆಪಿ ಉ.ಪ್ರ. ಅಭ್ಯರ್ಥಿಗಳ ಆಯ್ಕೆ ಕುರಿತು ಗುರುವಾರ ಚರ್ಚಿಸಿದೆ. ವಿಧಾನ ಪರಿಷತ್‌ ಸದಸ್ಯರಾಗಿರುವ ಡಿಸಿಎಂ ಕೇಶವ ಪ್ರಸಾದ್‌ ಮೌರ್ಯ ಸಿರಾತು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಮತ್ತೂಬ್ಬ ಡಿಸಿಎಂ  ದಿನೇಶ್‌ ಶರ್ಮಾ, ಉ.ಪ್ರ.ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌ ಸ್ಪರ್ಧೆ  ಬಗ್ಗೆಯೂ ತೀರ್ಮಾನಿಸಲಾಗಿದೆ. ಫೆ.10 ಮತ್ತು ಫೆ.14ರಂದು ನಡೆಯಲಿರುವ ಮೊದಲ ಎರಡು ಹಂತಗಳಲ್ಲಿ 113 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ 94 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದರ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಆದರೆ, ಇದು ಪ್ರಧಾನಿ ಮೋದಿಯವರ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಿವಸೇನೆ ಅಸಮಾಧಾನ: ಮಹಾರಾಷ್ಟ್ರದ ಮಾದರಿಯಲ್ಲೇ ಗೋವಾದಲ್ಲೂ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಶಿವಸೇನೆಯ ಪ್ರಯತ್ನಕ್ಕೆ ಕಾಂಗ್ರೆಸ್‌ ಸೊಪ್ಪು ಹಾಕಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಿವಸೇನೆ, “ಗೋವಾದ ಪರಿಸ್ಥಿತಿ ಹೇಗಿದೆಯೆಂದರೆ ಕಾಂಗ್ರೆಸ್‌ ಏನಾದರೂ ಏಕಾಂಗಿಯಾಗಿ ಸ್ಪರ್ಧಿಸಿದರೆ ಒಂದಂಕಿ ದಾಟುವುದೂ ಅನುಮಾನವಿದೆ’ ಎಂದು ಪಕ್ಷದ ಮುಖಂಡ ಸಂಜಯ ರಾವತ್‌ ಹೇಳಿದ್ದಾರೆ.

ಆಪ್‌ ಸಿಎಂ ಅಭ್ಯರ್ಥಿ ಜನರಿಂದ ಆಯ್ಕೆ! :

ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಘೋಷಿಸಿದ್ದಾರೆ. ಇದಕ್ಕೆಂದೇ ಗುರುವಾರ ಮೊಬೈಲ್‌ ಸಂಖ್ಯೆಯೊಂದನ್ನು ಅನಾವರಣಗೊಳಿಸಿದ್ದು, ಜ.17ರೊಳಗೆ ಜನರು ಎಸ್ಸೆಮ್ಮೆಸ್‌ ಅಥವಾ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ಸಿಎಂ ಅಭ್ಯರ್ಥಿ ಯಾರಾಗಬೇಕೆಂದು ತಮ್ಮ ಅಭಿಪ್ರಾಯವನ್ನು ಕಳುಹಿಸುವಂತೆ ಕೇಜ್ರಿವಾಲ್‌ ಸೂಚಿಸಿದ್ದಾರೆ. ಜನಾಭಿಪ್ರಾಯ ಬಂದ ಬಳಿಕ ಸಿಎಂ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದಿದ್ದಾರೆ. “ಭಗವಂತ್‌ ಮನ್‌ ನನ್ನ ಕಿರಿಯ ಸಹೋದರನಿದ್ದಂತೆ. ಅವರೇ ಸಿಎಂ ಆಗಬೇಕೆಂಬುದು ನನ್ನ ಆಸೆ. ಆದರೆ, ಜನರೇ ನಿರ್ಧರಿಸಲಿ ಎಂದು ಅವರು ಹೇಳಿದ್ದಾರೆ’ ಎಂದೂ ಕೇಜ್ರಿವಾಲ್‌ ನುಡಿದಿದ್ದಾರೆ.

ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಅವರಿಗೆ ತಮ್ಮದೆಂದು ಹೇಳಿಕೊಳ್ಳಲು ಏನೂ ಇಲ್ಲ. ಹಾಗಾಗಿ, ಬೇರೆ ಪಕ್ಷಗಳ ನಾಯಕರನ್ನು ಸೆಳೆದುಕೊಂಡು ಶೋ ಮಾಡಲು ಹೊರಟಿ ದ್ದಾರೆ. ಆದರೆ, ಅವರ ಕನಸು ನನಸಾಗದು.-ಬೃಜೇಶ್‌ ಪಾಠಕ್‌, ಉ.ಪ್ರದೇಶ ಸಚಿವ

ಕಾಂಗ್ರೆಸ್‌ ನಾಯಕರು ಮೊದಲು ತಮ್ಮ ನಾಯಕರೇ “ದೇಶದ ದೊರೆಗಳು’ ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಗೋವಾದಲ್ಲಿ ಕಾಂಗ್ರೆಸ್‌ ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದ್ದರೆ, ನಾವೀಗ ಅಲ್ಲಿಗೆ ಎಂಟ್ರಿಯಾಗುವ ಪರಿಸ್ಥಿತಿಯೇ ಬರುತ್ತಿರಲಿಲ್ಲ.-ಮೊಹುವಾ ಮೊಯಿತ್ರಾ, ಟಿಎಂಸಿ ಸಂಸದೆ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.