Haryana elections: ಮತದಾನ ದಿನಾಂಕ ಅಕ್ಟೋಬರ್ 5 ಕ್ಕೆ ಮುಂದೂಡಿದ ಚುನಾವಣ ಆಯೋಗ

ಬಿಜೆಪಿಯ ತಂತ್ರವಿದು... ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳ ಅಸಮಾಧಾನ

Team Udayavani, Aug 31, 2024, 9:07 PM IST

1-vote

ಹೊಸದಿಲ್ಲಿ: ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 1 ರಂದು ನಡೆಯಬೇಕಾಗಿದ್ದ ಮತದಾನವನ್ನು ಚುನಾವಣ ಆಯೋಗವು ಶನಿವಾರ(ಆ 31) ಅಕ್ಟೋಬರ್ 5 ಕ್ಕೆ ಮುಂದೂಡಿದೆ.

ಅಕ್ಟೋಬರ್ 1 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಮೂರನೇ ಹಂತದ ಮತದಾನದ ದಿನಾಂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ಎರಡರ ಚುನಾವಣಾ ಫಲಿತಾಂಶಗಳನ್ನು ಅಕ್ಟೋಬರ್ 4 ರ ಬದಲಾಗಿ ಅಕ್ಟೋಬರ್ 8 ರಂದು ಪ್ರಕಟಿಸಲಾಗುತ್ತದೆ.

ಅಧಿಸೂಚನೆಯಲ್ಲಿ, ಚುನಾವಣಾ ಸಮಿತಿಯು, “ರಾಷ್ಟ್ರೀಯ ಪಕ್ಷಗಳು, ರಾಜ್ಯ ಮಟ್ಟದ ಪಕ್ಷಗಳು ಮತ್ತು ಅಖಿಲ ಭಾರತ ಬಿಷ್ಣೋಯಿ ಮಹಾಸಭಾದಿಂದ ಹರ್ಯಾಣದ ಬಿಷ್ಣೋಯ್ ಸಮುದಾಯದ ಜನರು ಶತಮಾನಗಳ ಹಳೆಯ ಅಸೋಜ್ ಅಮವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳುತಿರುವ ಕಾರಣ, ಆ ಸಮುದಾಯದ ಪ್ರಾತಿನಿಧ್ಯವನ್ನು ಸ್ವೀಕರಿಸಿ ದಿನಾಂಕವನ್ನು ಮುಂದೂಡಲಾಗಿದೆ” ಎಂದು ಹೇಳಿದೆ.

ಬಿಜೆಪಿ ಸ್ವಾಗತ
ಬಿಜೆಪಿ ನಾಯಕ ಆರ್‌ಪಿ ಸಿಂಗ್ ಮಾತನಾಡಿ, ‘ಈ ಹಿಂದೆಯೂ ಚುನಾವಣ ದಿನಾಂಕಗಳನ್ನು ಮುಂದೂಡಲಾಗಿದೆ. ದೊಡ್ಡ ಸಮುದಾಯದ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಆಯೋಗ ಈ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಸಮಾಧಾನ

ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಪ್ರತಿಕ್ರಿಯಿಸಿ “ಚುನಾವಣ ಆಯೋಗದ ಬಗ್ಗೆ ನಾವು ಏನು ಹೇಳಬಹುದು ? ಬಿಜೆಪಿ 10 ವರ್ಷಗಳಲ್ಲಿ ಸ್ಪರ್ಧೆಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ, 5 ದಿನಗಳಲ್ಲಿ ಏನಾಗಬಹುದು? ಕಾಂಗ್ರೆಸ್ ಸಿದ್ಧವಾಗಿದೆ ಮತ್ತು ನಾವು ಎಲ್ಲ ಸ್ಥಾನಗಳನ್ನೂ ಗೆಲ್ಲಲು ಪ್ರಯತ್ನಿಸುತ್ತೇವೆ” ಎಂದರು.

ಅಕ್ಟೋಬರ್ 4 ರ ಬದಲಾಗಿ ಅಕ್ಟೋಬರ್ 8 ರಂದು ಮತ ಎಣಿಕೆ ದಿನವನ್ನು ಬದಲಾಯಿಸಲಾಗಿರುವ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಪ್ರತಿಕ್ರಿಯಿಸಿ “ಆ ಸಮಯದಲ್ಲಿ ಹಬ್ಬವಿದೆ ಎಂದು ಚುನಾವಣ ಆಯೋಗಕ್ಕೆ ತಿಳಿದಿರಲಿಲ್ಲವೇ? ಅವರು ಪರಿಗಣಿಸಿದ ನಂತರ ಅಂತಿಮ ದಿನಾಂಕವನ್ನು ಘೋಷಿಸುತ್ತಾರೆ ಅವರು ಚುನಾವಣೆಯನ್ನು ಅನುಮಾನಾಸ್ಪದವಾಗಿ ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಹರ್ಯಾಣ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಪ್ರತಿಕ್ರಿಯಿಸಿ “ಇದು ಚುನಾವಣ ಆಯೋಗದ ಹಕ್ಕು, ಅವರು ದಿನಾಂಕವನ್ನು ವಿಸ್ತರಿಸಿದ್ದಾರೆ,ಬಿಜೆಪಿ ಈಗಾಗಲೇ ಹರಿಯಾಣದಲ್ಲಿ ಸೋಲನ್ನು ಒಪ್ಪಿಕೊಂಡಿದೆ. ಹರಿಯಾಣ ಸರ್ಕಾರವು ಚುನಾವಣ ಆಯೋಗಕ್ಕೆ ಪತ್ರ ಬರೆದಾಗ, ನಾನು ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದೆ ಎಂದರು.

ತಂತ್ರಗಳನ್ನು ಅನುಸರಿಸುತ್ತಿದೆ
ಹರ್ಯಾಣ ಮಾಜಿ ಡಿಸಿಎಂ ಮತ್ತು ಜೆಜೆಪಿ ನಾಯಕ ದುಶ್ಯಂತ್ ಚೌಟಾಲಾ ಅವರು ಪ್ರತಿಕ್ರಿಯಿಸಿ “ನಾವು ಇದನ್ನು ಸ್ವಾಗತಿಸುತ್ತೇವೆ, ಬಿಜೆಪಿ ತನ್ನ ಸೋಲನ್ನು ತಪ್ಪಿಸಲು ಈ ಎಲ್ಲಾ ತಂತ್ರಗಳನ್ನು ಅನುಸರಿಸುತ್ತಿದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.