ಜಾಮೀನು ಸಿಕ್ಕ ಖುಷಿಯಲ್ಲಿದ್ದ ಕೇಜ್ರಿವಾಲ್ಗೆ ಹಿನ್ನಡೆ: ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ
Team Udayavani, Jun 21, 2024, 11:54 AM IST
ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರಾದ ಖುಷಿಯಲ್ಲಿದ್ದ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿದೆ. ನ್ಯಾಯಾಲಯ ನೀಡಿದ ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಕೇಜ್ರಿವಾಲ್ ಗೆ ಗುರುವಾರ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು ಅದರಂತೆ ಶುಕ್ರವಾರ ಜೈಲಿನಿಂದ ಬಿಡುಗಡೆಹೊಂದುವ ಖುಷಿಯಲ್ಲಿದ್ದರು ಆದರೆ ಇದರ ನಡುವೆ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಜಾಮೀನು ಅರ್ಜಿಯ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದು ಅರ್ಜಿ ಆಲಿಸಿದ ಹೈಕೋರ್ಟ್ ಕೇಜ್ರಿವಾಲ್ ಬಿಡುಗಡೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಗುರುವಾರ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ ವೈಯಕ್ತಿಕ ಬಾಂಡ್, ತನಿಖೆಗೆ ಅಡ್ಡಿಪಡಿಸದಂತೆ ಅಲ್ಲದೆ ಸಾಕ್ಷಿದಾರರ ಮೇಲೆ ಯಾವುದೇ ಪ್ರಭಾವ ಬೀರದಂತೆ ಷರತ್ತುಗಳನ್ನು ವಿಧಿಸಿ ಇದರ ಆಧಾರದಲ್ಲಿ ದಿಲ್ಲಿ ಸಿಎಂಗೆ ಜಾಮೀನು ಮಂಜೂರು ಮಾಡಿತ್ತು. ಈ ನಡುವೆ ಜಾಮೀನು ಆದೇಶಕ್ಕೆ 48 ಗಂಟೆಗಳ ತಡೆ ನೀಡಬೇಕು ಎಂಬ ಜಾರಿ ನಿರ್ದೇಶನಾಲಯದ ಮನವಿ ಮಾಡಿತ್ತು ಆದರೆ ನ್ಯಾಯಾಲಯ ಜಾರಿ ನಿರ್ದೇಶನಾಲಯದ ಮನವಿಯನ್ನು ತಿರಸ್ಕರಿಸಿದೆ.
ಇದನ್ನೂ ಓದಿ: Movies; ಇಲ್ಲಿವರೆಗೆ ಒಂದ್ ಲೆಕ್ಕ ಇನ್ಮುಂದೆ ಬೇರೆ ಲೆಕ್ಕ: ಸ್ಟಾರ್ ಸಿನಿಮಾಗಳು ಮುಂದಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.