ಇಂಗ್ಲಿಷ್‌ ಬುದ್ಧಿವಂತಿಕೆಯ ಮಾನದಂಡವಲ್ಲ ಅದೊಂದು ಸಂವಹನದ ಮಾಧ್ಯಮವಷ್ಟೇ ಎಂದ ಮೋದಿ

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಲಿದೆ 5ಜಿ

Team Udayavani, Oct 19, 2022, 9:30 PM IST

ಇಂಗ್ಲಿಷ್‌ ಬುದ್ಧಿವಂತಿಕೆಯ ಮಾನದಂಡವಲ್ಲ ಅದೊಂದು ಸಂವಹನದ ಮಾಧ್ಯಮವಷ್ಟೇ ಎಂದ ಮೋದಿ

ಗಾಂಧಿನಗರ: “ಇಂಗ್ಲಿಷ್‌ನ್ನು ಮನುಷ್ಯನ ಬುದ್ಧಿವಂತಿಕೆಯ ಮಾನದಂಡವಾಗಿ ನೋಡಬಾರದು. ಅದು ಸಂವಹನದ ಒಂದು ಮಾಧ್ಯಮವಷ್ಟೇ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸ್ಥಳೀಯ ಭಾಷೆಗಳ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ.

ಗುಜರಾತ್‌ನ ಗಾಂಧಿನಗರದ ಅದಲಾಜ್‌ ನಗರದಲ್ಲಿ ರಾಜ್ಯ ಸರ್ಕಾರದ “ಮಿಶನ್‌ ಸ್ಕೂಲ್ಸ್‌ ಆಫ್ ಎಕ್ಸಲೆನ್ಸ್‌’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂಗ್ಲಿಷ್‌ ಸರಿಹೊಂದುವುದಿಲ್ಲ ಎನ್ನುವಂತಹ ಮಕ್ಕಳಿಗೆ ಸ್ಥಳೀಯ ಭಾಷೆಗಳಲ್ಲೇ ಪಾಠ ಹೇಳಿಕೊಡಬೇಕು ಎಂದು ಅವರು ಹೇಳಿದ್ದಾರೆ.

“ದೇಶದಲ್ಲಿ 5ಜಿ ಟೆಲಿಕಾಂ ವ್ಯವಸ್ಥೆಯು ಶಿಕ್ಷಣವನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಇಂಗ್ಲಿಷ್‌ ಭಾಷೆಯತ್ತ ಇದ್ದ ನಮ್ಮ ಗುಲಾಮ ಮನಸ್ಥಿತಿಯನ್ನು ತೊಡೆದುಹಾಕುತ್ತದೆ’ ಎಂದು ಪ್ರಧಾನಿ ಹೇಳಿದ್ದಾರೆ.

ಆತ್ಮನಿರ್ಭರತೆಯ ಸಂಕೇತ:
ಗಾಂಧಿನಗರದಲ್ಲಿ ನಡೆಯುತ್ತಿರುವ ಡಿಫೆನ್ಸ್‌ ಎಕ್ಸ್‌ಪೋದಲ್ಲಿ ಭಾಗವಹಿಸಿದ ಪ್ರಧಾನಿ ಅವರು, ರಕ್ಷಣಾ ಇಲಾಖೆಯು ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಹೆಚ್ಚಾಗಿ ಖರೀದಿಸುತ್ತಿರುವುದು ರಕ್ಷಣಾ ಇಲಾಖೆಯಲ್ಲಿ ಆತ್ಮನಿರ್ಭರತೆಯನ್ನು ತೋರಿಸುತ್ತದೆ ಎಂದರು. 2021-22ರಲ್ಲಿ 13,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ರಫ್ತು ಮಾಡಿದ್ದೇವೆ. ಅದನ್ನು ಮುಂದಿನ ವರ್ಷಗಳಲ್ಲಿ 40,000 ಕೋಟಿ ರೂ.ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದೂ ಅವರು ತಿಳಿಸಿದರು.

ಇದೇ ವೇಳೆ ದಕ್ಷಿಣ ಆಫ್ರಿಕಾ ಕೂಡ ಭಾರತದ ಬ್ರಹ್ಮೋಸ್‌ ಕ್ಷಿಪಣಿಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ ಎಂದು ಎಕ್ಸ್‌ಪೋದಲ್ಲಿ ಭಾಗವಹಿಸಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.