Maharashtra Polls: ಮಹಾರಾಷ್ಟ್ರದಲ್ಲಿ ನಾಮಿನೇಶನ್‌ ಮುಗಿದರೂ ಟಿಕೆಟ್‌ ಗೊಂದಲ!


Team Udayavani, Oct 29, 2024, 10:47 PM IST

Even though the nomination is over in Maharashtra, the ticket is confused!

ಮುಂಬೈ: ಮಹಾರಾಷ್ಟ್ರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಮುಕ್ತಾಯವಾಗಿದೆ.  ಆಡಳಿತ ಹಾಗೂ ವಿಪಕ್ಷ ಮೈತ್ರಿಕೂಟದಲ್ಲಿನ ಟಿಕೆಟ್‌ ಹಂಚಿಕೆ ಗೊಂದಲ ಮಾತ್ರ ಮುಕ್ತಾಯವಾಗಿಲ್ಲ. ಮಂಗಳವಾರ ಸಾಯಂಕಾಲದ ಸಮಯಕ್ಕೆ ಮಹಾಯುತಿ 4 ಸ್ಥಾನಗಳನ್ನು ತಪ್ಪಿಸಿಕೊಂಡಿದ್ದರೆ, ಮಹಾ ವಿಕಾಸ ಅಘಾಡಿ 11 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ಬಿಜೆಪಿ ಒಟ್ಟು 152 ಸ್ಥಾನಗಳಲ್ಲಿ, ಅಜಿತ್‌ ಪವಾರ್‌ ಬಣದ ಎನ್‌ಸಿಪಿ 52 ಮತ್ತು ಏಕನಾಥ ಶಿಂಧೆ ಬಣದ ಶಿವಸೇನೆ 80 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಒಟ್ಟು 284 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, 4 ಸ್ಥಾನಗಳಿಗೆ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿಲ್ಲ. ಮಹಾ ವಿಕಾಸ ಅಘಾಡಿ ಮೈತ್ರಿಯಲ್ಲಿರುವ ಕಾಂಗ್ರೆಸ್‌ 103, ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಹಾಗೂ ಶರದ್‌ ಪವಾರ್‌ ಅವರ ಎನ್‌ಸಿಪಿ ತಲಾ 87 ಸ್ಥಾನಗಳಲ್ಲಿ ಸ್ಪರ್ಧಿಸಿವೆ. 277 ಸ್ಥಾನ ಗಳಲ್ಲಿ ಸ್ಪರ್ಧಿಸಿದ್ದು, 11 ಸ್ಥಾನಗಳನ್ನು ತಪ್ಪಿಸಿಕೊಂಡಿವೆ.

ಈ ಮೈತ್ರಿಕೂಟಗಳು ಬಾಕಿಯಾಗಿರುವ 15 ಕ್ಷೇತ್ರಗಳನ್ನು ತಮ್ಮ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳಿಗೆ ಬಿಟ್ಟುಕೊಟ್ಟಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

2 ನಾಮಪತ್ರ ಸಲ್ಲಿಸಿದ ನವಾಬ್‌ ಮಲಿಕ್‌ ಎನ್‌ಸಿ ಪಿ ಯಿಂದ ಸ್ಪರ್ಧಿಸಿರುವ ನವಾಬ್‌ ಮಲಿಕ್‌, ಮುಂಬೈನ ಮನ್‌ಖದ್‌ì ಶಿವಾಜಿ ನಗರ ಕ್ಷೇತ್ರದಿಂದ 2 ನಾಮ ಪತ್ರ ಸಲ್ಲಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಎನ್‌ಸಿಪಿ ಮತ್ತು ಪಕ್ಷೇತ್ರ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಸ್ಪಷ್ಟನೆ ನೀಡಿದ ಅವರು, ಎನ್‌ಸಿಪಿಯಿಂದ ನನಗೆ ಬಿ ಫಾರ್ಮ್ ಸಿಕ್ಕಿದೆ. ನಾನು ಎನ್‌ಸಿಪಿ ಅಭ್ಯರ್ಥಿ ಎಂದು ಹೇಳಿದ್ದಾರೆ. ನವಾಬ್‌ಗ ಟಿಕೆಟ್‌ ವಿರೋಧಿಸಿದ್ದ ಬಿಜೆಪಿಗೆ ಮುಖಭಂಗವಾಗಿದೆ.

ಟಿಕೆಟ್‌ ಸಿಗದ್ದಕ್ಕೆ ಉದ್ಧವ್‌ ಹೊಗಳಿದ ಶಿಂಧೆ ಬಣದ ಶಾಸಕ

ಕಳೆದ ವರ್ಷ ಉದ್ಧವ್‌ ಬಣ ತೊರೆದು ಏಕನಾಥ್‌ ಶಿಂಧೆ ಬಣ ಸೇರಿದ್ದ ಶಾಸಕ ಶ್ರೀನಿವಾಸ್‌ ವಂಗಾ ಟಿಕೆಟ್‌ ಸಿಗದ ಕಾರಣ ಈಗ ಪಶ್ಚಾತಾಪ ವ್ಯಕ್ತ ಪಡಿಸಿದ್ದಾರೆ. ಶಿಂಧೆ ಬಣವನ್ನು ತೊರೆದಿರುವ ಅವರು, ಉದ್ಧವ್‌ ಬಣ ಸೇರುವುದಾಗಿ ಹೇಳಿದ್ದಾರೆ. ಬಿಜೆಪಿ ಮಹಾರಾಷ್ಟ್ರ ಘಟಕದ ವಕ್ತಾರೆ ಶೈನಾ.ಎನ್‌.ಸಿ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಅಭ್ಯರ್ಥಿಯಾಗಿ ಮುಂಬಾ ದೇವಿ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.