Bihar  ದರೋಡೆಕೋರ-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಜೈಲಿನಿಂದ ಬಿಡುಗಡೆ

ಬಿಡುಗಡೆಗೆ ಬಿಜೆಪಿ ಸೇರಿ ಹಲವರಿಂದ ವ್ಯಾಪಕ ಆಕ್ರೋಶ... ರಜಪೂತ ಮತಗಳ ಮೇಲೆ ಕಣ್ಣು?

Team Udayavani, Apr 27, 2023, 8:06 PM IST

1-sadasd

ಪಾಟ್ನಾ : ಬಿಹಾರದ ಕೊಲೆ ಅಪರಾಧಿ, ದರೋಡೆಕೋರ-ರಾಜಕಾರಣಿ ಆನಂದ್ ಮೋಹನ್ ಸಿಂಗ್ ರನ್ನು ಗುರುವಾರ ಮುಂಜಾನೆ 3 ಗಂಟೆಗೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಂಭ್ರಮ ವ್ಯಕ್ತ ಪಡಿಸಿರುವ ಪುತ್ರ ಚೇತನ್ ಮೋಹನ್, ಬಿಹಾರ ಜೈಲಿನಿಂದ ತಂದೆಯ ಬಿಡುಗಡೆಯಲ್ಲಿ ಯಾವುದೇ ರಾಜಕೀಯ ದೃಷ್ಟಿಕೋನವನ್ನು ನಿರಾಕರಿಸಿ, ತಂದೆ ಶಿಕ್ಷೆಯನ್ನು ಅನುಭವಿಸಿದ್ದಾರೆ ಮತ್ತು ಅವರ ಬಿಡುಗಡೆ ಸರಿಯಾದ ನಿರ್ಧಾರ ಎಂದಿದ್ದಾರೆ.

ಬಿಹಾರದ ಪ್ರತಿಪಕ್ಷ ಬಿಜೆಪಿಯ ನಾಯಕರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಮಹಾ ಘಟ್ಬಂಧನ್ ಸರಕಾರದ ಈ ಕ್ರಮದ ಬಗ್ಗೆ ವ್ಯಾಪಕವಾಗಿ ಟೀಕಿಸಿ ಆಕ್ರೋಶ ಹೊರ ಹಾಕಿದ್ದಾರೆ. ಇದು ರಜಪೂತ ಮತಗಳ ಮೇಲೆ ಕಣ್ಣಿಟ್ಟು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

“ವಿರೋಧ ಪಕ್ಷದವರು ಏನು ಹೇಳುತ್ತಿದ್ದಾರೆ ಎಂಬುದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ನನ್ನ ತಂದೆ ನಿರಪರಾಧಿಯಾಗಿದ್ದರೂ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಇದು ಕುಟುಂಬಕ್ಕೆ ತುಂಬಾ ಕಷ್ಟಕರವಾಗಿತ್ತು” ಎಂದು ತೇಜಸ್ವಿ ಯಾದವ್ ಅವರ ಆರ್ ಜೆಡಿ ಪಕ್ಷದ  ಶಾಸಕ ಚೇತನ್ ಮೋಹನ್ ಹೇಳಿದ್ದಾರೆ.

“16 ವರ್ಷಗಳ ನಂತರ ಅವರು ಹೊರಬರುತ್ತಿದ್ದಾರೆ. ಇದು ನಮ್ಮ ಕುಟುಂಬಕ್ಕೆ ತುಂಬಾ ಭಾವನಾತ್ಮಕ ಕ್ಷಣವಾಗಿದೆ. ನಾವು ಅನೇಕ ವರ್ಷಗಳಿಂದ ನಮ್ಮ ತಂದೆಯಿಲ್ಲದೆ ಬದುಕುತ್ತಿದ್ದೇವು, ಅದು ಎಷ್ಟು ನೋವಿನಿಂದ ಕೂಡಿದೆ ಎಂದು ನಿಮಗೆ ತಿಳಿದಿದೆ”ಎಂದು ಚೇತನ್ ಮೋಹನ್ ಹೇಳಿದ್ದಾರೆ.

1994 ರಲ್ಲಿ, ಆನಂದ್ ಮೋಹನ್ ಸಿಂಗ್ ಅವರ ಪಕ್ಷಕ್ಕೆ ಸೇರಿದ ಮತ್ತೊಬ್ಬ ದರೋಡೆಕೋರ-ರಾಜಕಾರಣಿಯ ಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನಸಮೂಹದಿಂದ ಅಂದಿನ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಅವರನ್ನು ಹತ್ಯೆಗೈಯಲಾಗಿತ್ತು. ಆನಂದ್‌ ಮೋಹನ್‌ ಐಎಎಸ್ ಅಧಿಕಾರಿಯನ್ನು ಬೆದರಿಸಿ ಹತ್ಯೆಗೈದಿದ್ದಾನೆ ಎಂದು ಅಪರಾಧ ಸಾಬೀತಾಗಿತ್ತು. 2007 ರಲ್ಲಿ, ಆನಂದ್ ಮೋಹನ್ ಗೆ ಮರಣದಂಡನೆ ವಿಧಿಸಲಾಗಿತ್ತು, ಆದರೆ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿತ್ತು.

ಈ ತಿಂಗಳ ಆರಂಭದಲ್ಲಿ, ಬಿಹಾರ ಸರಕಾರವು ಜೈಲು ನಿಯಮಗಳನ್ನು ಬದಲಾಯಿಸಿ, ಕರ್ತವ್ಯದಲ್ಲಿದ್ದ ಸಾರ್ವಜನಿಕ ನೌಕರನನ್ನು ಹತ್ಯೆ ಮಾಡಿದ ಅಪರಾಧಿಗಳ ಜೈಲು ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ಮಾಯಾವತಿಯವರ ಬಿಎಸ್ ಪಿ ಕೂಡ ಆನಂದ್ ಮೋಹನ್ ರನ್ನು ಬಿಡುಗಡೆ ಮಾಡಿದ ನಿತೀಶ್ ಕುಮಾರ್ ಸರಕಾರದ ಕ್ರಮವನ್ನು ಟೀಕಿಸಿದೆ, ನಿಯಮಗಳಲ್ಲಿನ ತಿರುಚುವಿಕೆ “ದಲಿತ ವಿರೋಧಿ” ಎಂದು ಹೇಳಿದೆ ಮತ್ತು ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.