![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jul 4, 2019, 6:26 PM IST
ನವದೆಹಲಿ: ಸ್ಥಳೀಯ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿ ಪರೀಕ್ಷೆಯನ್ನು ಇನ್ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಕೇಂದ್ರ ಸರ್ಕಾರ ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಈ ಬಗ್ಗೆ ಲೋಕಸಭೆಗೆ ತಿಳಿಸಿದ್ದು, ಇದರಿಂದಾಗಿ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆಯಲು ಹೆಚ್ಚಿನ ಅವಕಾಶ ಕಲ್ಪಿಸಿಕೊಟ್ಟಂತಾಗಿದೆ.
ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅನುವು ಮಾಡಿಕೊಟ್ಟಿದ್ದಕ್ಕೆ, ನಮ್ಮ ಮನವಿಯಂತೆ ಬ್ಯಾಂಕ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಕೇಂದ್ರದ ವಾಣಿಜ್ಯ ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದರಿಂದ ನಮ್ಮ ಗ್ರಾಮೀಣ ಪ್ರದೇಶದ ಯುವ ಸಮುದಾಯಕ್ಕೆ ಅತ್ಯಂತ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
ನಮ್ಮ ಮನವಿಯಂತೆ ಬ್ಯಾಂಕ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ವಂದನೆಗಳು. ಇದರಿಂದ ನಮ್ಮ ಗ್ರಾಮೀಣ ಪ್ರದೇಶದ ಯುವ ಸಮುದಾಯಕ್ಕೆ ಅತ್ಯಂತ ಅನುಕೂಲವಾಗಲಿದೆ.#ibps
— CM of Karnataka (@CMofKarnataka) July 4, 2019
ಬ್ಯಾಂಕ್ ಸಿಬ್ಬಂದಿ ನೇಮಕಾತಿ ನಡೆಸುವ ಪರೀಕ್ಷೆಯನ್ನು ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯ, ಉರ್ದು, ತೆಲುಗು, ಪಂಜಾಬಿ ಅಸ್ಸಾಮಿ, ಬೆಂಗಾಲಿ ಭಾಷೆಗಳಲ್ಲಿ ಬರೆಯಬಹುದಾಗಿದೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.