![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 20, 2021, 9:22 AM IST
ಗಾಜಿಯಾಬಾದ್: ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಜನರೇಟರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಶತಾಬ್ದಿ ಎಕ್ಸ್ ಪ್ರೆಸ್ ರೈಲು ಗಾಜಿಯಾಬಾದ್ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಈ ಘಟ ನಡೆದಿದೆ. ಕೂಡಲೇ ಆ ಬೋಗಿಯನ್ನು ಪ್ರತ್ಯೇಕಿಸಲಾಗಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗಿದೆ.
ಇದನ್ನೂ ಓದಿ:ಶಾಲೆ ಮೇಲ್ಛಾವಣಿ, ಫುಟ್ಪಾತ್ನಲ್ಲಿ ಮಲಗಿದ ಅಭ್ಯರ್ಥಿಗಳು
ಜನರೇಟರ್ ಮತ್ತು ರೈಲಿನ ಲಗೇಜ್ ಇರುವ ಶತಾಬ್ದಿ ಎಕ್ಸ್ ಪ್ರೆಸ್ ನ ಕೊನೆಯ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬೋಗಿಯನ್ನು ಪ್ರತ್ಯೇಕಿಕರಿಸಿ ನಂತರ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ. ಬೋಗಿಯ ಬಾಗಿಲುಗಳು ಜಾಮ್ ಆದ ಕಾರಣ ಬಾಗಿಲುಗಳನ್ನು ಒಡೆದು ಬೆಂಕಿ ನಂದಿಸಲಾಗಿದೆ ಎಂದ ವರದಿ ತಿಳಿಸಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಲಿ, ಸಾವು ನೋವು ಸಂಭವಿಸಿಲ್ಲ. ಘಟನೆಯ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಮಾರ್ಚ್ 13ರಂದು ಡೆಹ್ರಾಡೂನ್- ದಿಲ್ಲಿ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.