Maharashtra ವಿಕಾಸ ಅಘಾಡಿಯಲ್ಲಿ ಸಿಎಂ ಹುದ್ದೆಗಾಗಿ ಜಟಾಪಟಿ?
Team Udayavani, Aug 17, 2024, 6:00 AM IST
ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಆಗುವುದಕ್ಕೆ ಮೊದಲೇ ಮಹಾ ವಿಕಾಸ ಅಘಾಡಿ ಮೈತ್ರಿಕೂಟ (ಎಂವಿಎ)ದಲ್ಲಿ ಸಿಎಂ ಹುದ್ದೆಗೆ ಗುದ್ದಾಟ ನಡೆದಿದೆ. ಚುನಾವಣೆ ಮೊದಲು ಮೈತ್ರಿಕೂಟದ ಸಿಎಂ ಅಭ್ಯರ್ಥಿ ಯಾರು ಎಂದು ತೀರ್ಮಾನ ಆಗಲಿ ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
ಜತೆಗೆ ಕಾಂಗ್ರೆಸ್ ಮತ್ತು ಎನ್ಸಿಪಿ(ಶರದ್) ಘೋಷಿಸಿದ ಯಾವುದೇ ಅಭ್ಯರ್ಥಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿ ಕಾರ್ಯಕರ್ತರನ್ನುದ್ದೇಶಿ ಮಾತನಾಡಿ, ಎನ್ಸಿಪಿ, ಕಾಂಗ್ರೆಸ್ ಬಿಜೆಪಿ ನೇತೃತ್ವದ ಮೈತ್ರಿ ಸರಕಾರವನ್ನು ಪದಚ್ಯುತಿಗೊಳಿಸಲು ಗಮನ ಹರಿಸಬೇಕು ಎಂದಿದ್ದಾರೆ. ನವೆಂಬರ್ನಲ್ಲಿ ವಿಧಾನ ಸಭೆ ಚುನಾವಣೆ ನಡೆಯಬಹುದು.
ವಕ್ಫ್ ಆಸ್ತಿ ಮುಟ್ಟಲು ಯಾರಿಗೂ ಬಿಡುವುದಿಲ್ಲ
ವಕ್ಫ್, ದೇವಸ್ಥಾನ ಸೇರಿ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಆಸ್ತಿಯನ್ನು ಸರಕಾರ ವಶಪಡಿಸಿಕೊಳ್ಳಲು ಅವಕಾಶ ನೀಡಲ್ಲ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿ, ಇದು ನಮ್ಮ ಪಕ್ಷದ ವಾಗ್ಧಾನ. ಈ ನಿಟ್ಟಿನಲ್ಲಿ ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದಿ ದ್ದಾರೆ. ಲೋಕಸಭೆಯಲ್ಲಿ ಬಹುಮತ ಇಲ್ಲದ್ದಕ್ಕೆ ತಿದ್ದುಪಡಿ ಕಾಯ್ದೆಯನ್ನು ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲು ಸಾಧ್ಯವಾಗಿರಲಿಲ್ಲ ಎಂದು ಕೇಂದ್ರವನ್ನು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.