![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 22, 2020, 3:05 PM IST
ನವದೆಹಲಿ: ಹಳ್ಳಿಯಲ್ಲಿ ನೆಟ್ ವರ್ಕ್ ಸಮಸ್ಯೆಯಿದ್ದರಿಂದ ಸುಮಾರು 200 ಮಕ್ಕಳು ಆನ್ಲೈನ್ ತರಗತಿಗಳಿಗೆ ಹಾಜರಾಗಲು ಪ್ರತಿದಿನ 50 ಕಿಲೋಮೀಟರ್ ನಡೆದು ಹೋಗುತ್ತಿದ್ದ ಘಟನೆ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ನಡೆಯುತ್ತಿದೆ.
ಕೋವಿಡ್ ಲಾಕ್ ಡೌನ್ ಕಾರಣದಿಂದ ಹಾಗೂ ನಿಸರ್ಗಾ ಚಂಡಮಾರುಗಳಿಂದ ಈ ಗ್ರಾಮ ಹಲವಾರು ಸಮಸ್ಯೆಗಳನ್ನು ಎದುರಿಸಿತ್ತು. ಮಾತ್ರವಲ್ಲದೆ ಇಂಟರ್ನೆಟ್ ಸಂಪರ್ಕವೂ ಕಡಿತಗೊಂಡಿತ್ತು, ಇದರಿಂದ ಮಕ್ಕಳಿಗೆ ಅನ್ ಲೈನ್ ತರಗತಿಗಗಳಿಗೆ ಹಾಜರಾಗಲು ತೊಡಕಾಗಿತ್ತು. ಈ ಕಾರಣದಿಂದ ಮಕ್ಕಳು ಪಕ್ಕದ ಗ್ರಾಮಕ್ಕೆ ನಡೆದುಕೊಂಡು ಹೋಗಿ ತರಗತಿಗಳಿಗೆ ಹಾಜರಾಗುತ್ತಿದ್ದರು.
ಆದರೇ ಒಂದು ತಿಂಗಳು ಕಳೆದರೂ ಪರಿಸ್ಥಿತಿ ಸುಧಾರಿಸದಿದ್ದರಿಂದ, ಬೆಸೆತ್ತ ವಿದ್ಯಾರ್ಥಿಗಳು ಸಹಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಕದ ತಟ್ಟಿದ್ದಾರೆ. ದೂರು ಆಲಿಸಿದ ರಾಷ್ಟ್ರೀಯ ಮಕ್ಕಳ ಆಯೋಗ ಶೀಘ್ರದಲ್ಲಿ ಇಂಟರ್ನೆಟ್ ಸಂಪರ್ಕ ಕಲ್ಪಿಸುವುದಾಗಿ ಭರವಸೆ ನೀಡಿದೆ. ಮಾತ್ರವಲ್ಲದೆ ನೆಟ್ವರ್ಕ್ ಕಂಪೆನಿಗಳೊಂದಿಗೆ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದೆ.
ಜೂನ್ 3 ರಂದು ನಿಸರ್ಗ ಚಂಡಮಾರುತ ಈ ಗ್ರಾಮಕ್ಕೆ ಅಪ್ಪಳಿಸಿದ್ದರಿಂದ ನೆಟ್ವರ್ಕ್ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಅಂದಿನಿಂದ ಈ ಗ್ರಾಮದವರಾರೂ ಮೊಬೈಲ್ ಮತ್ತು ಡೇಟಾ ಸಂಪರ್ಕವನ್ನು ಹೊಂದಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೂ ಹೊಡೆತ ಬಿದ್ದಿದ್ದು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಿಸುವಂತೆ ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.