Politics: ಹತ್ತೇ ದಿನಕ್ಕೆ YSRCP ತೊರೆದ ಅಂಬಟಿ ರಾಯುಡು… ಮಾಜಿ ಕ್ರಿಕೆಟಿಗ ಹೇಳಿದ್ದೇನು?


Team Udayavani, Jan 6, 2024, 1:02 PM IST

Ambati Rayudu: ಪಕ್ಷ ಸೇರಿದ ಹತ್ತೇ ದಿನಕ್ಕೆ YSRCP ತೊರೆದ ಅಂಬಟಿ ರಾಯುಡು… ಹೇಳಿದ್ದೇನು?

ಅಮರಾವತಿ: ಎಂಟು ದಿನಗಳ ಹಿಂದೆಯಷ್ಟೇ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರ್ಪಡೆಯಾಗಿದ್ದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಶಾಕ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪಕ್ಷ ತೊರೆಯುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವಿಟರ್ x ನಲ್ಲಿ ಟ್ವೀಟ್ ಮಾಡಿದ ರಾಯುಡು ‘ಕೆಲ ದಿನಗಳ ಕಾಲ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಬೇರೆ ಯಾವ ಪಕ್ಷಕ್ಕೂ ಸೇರುವುದಿಲ್ಲ ಎಂದು ಸೂಚನೆ ನೀಡಿದ್ದಾರೆ. ಸಮಯ ಬಂದಾಗ ಮುಂದಿನ ಚಟುವಟಿಕೆಗಳ ಬಗ್ಗೆ ಬಹಿರಂಗಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ರಾಯುಡು ಜೂನ್ 2023 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದರು.

ವಾರದೊಳಗೆ ರಾಜೀನಾಮೆ
ಅಂಬಟಿ ರಾಯುಡು ಕಳೆದ ವಾರ ಡಿಸೆಂಬರ್ 28 ರಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಅವರ ಸಮ್ಮುಖದಲ್ಲಿ ವೈಎಸ್‌ಆರ್‌ಸಿಪಿ ಸೇರ್ಪಡೆಗೊಂಡರು. ವಿಧಾನಸಭೆ ಅಥವಾ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂಬ ಪ್ರಚಾರ ಪಕ್ಷದಲ್ಲಿ ಜೋರಾಗಿತ್ತು. ಇದೇ ವೇಳೆ ರಾಜೀನಾಮೆ ವಿಚಾರ ಸಂಚಲನ ಮೂಡಿಸಿತ್ತು. ವೈಎಸ್‌ಆರ್‌ಸಿಪಿ ಸೇರುವ ಮುನ್ನ ಜಗನ್ ಸರ್ಕಾರ ಕೈಗೊಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಅಂದು ಕಲ್ಯಾಣ ಕಾರ್ಯಕ್ರಮಗಳು ಇಷ್ಟವಾದ ಕಾರಣ ವೈಎಸ್‌ಆರ್‌ಸಿಪಿ ಸೇರುವುದಾಗಿ ಘೋಷಿಸಿದರು.

ರಾಜೀನಾಮೆ ಕಾರಣ..?
ಅಂಬಟಿ ರಾಯುಡು ಗುಂಟೂರಿನಿಂದ ಲೋಕಸಭೆಗೆ ಸ್ಪರ್ಧಿಸಲು ನಿರ್ಧರಿಸಿರುವುದು ಗೊತ್ತೇ ಇದೆ. ಟಿಕೆಟ್ ನೀಡುವ ಬಗ್ಗೆ ಪಕ್ಷದಿಂದ ಯಾವುದೇ ಭರವಸೆ ಇರಲಿಲ್ಲ. ಚುನಾವಣೆಗೆ ಸಮಯ ಸಮೀಪಿಸುತ್ತಿರುವ ಕಾರಣ ವಿಳಂಬವಾಗಿರುವುದರಿಂದ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಗುಂಟೂರು ಲೋಕಸಭೆಯಿಂದ ಸ್ಪರ್ಧೆ..?
ಅಂಬಟಿ ರಾಯುಡು ಅವರ ಹುಟ್ಟೂರು ಗುಂಟೂರು ಜಿಲ್ಲೆ. ಎಪಿಯಲ್ಲಿ ಕಾಪು ಜಾತಿಯು ಪ್ರಬಲ ಸಾಮಾಜಿಕ ಗುಂಪು. ಅವರು ಕ್ರಿಕೆಟ್‌ನಲ್ಲಿ ಮಿಂಚಿದರು ಮತ್ತು ಉತ್ತಮ ಹೆಸರು ಪಡೆದರು. ಫಾರ್ಮ್‌ನಲ್ಲಿರುವಾಗಲೇ ನಿವೃತ್ತಿ ಘೋಷಿಸಿದ ಅವರು ರಾಜಕೀಯದಲ್ಲಿ ಆಸಕ್ತಿ ಹೊಂದಿದ್ದರು. ಹಾಗಾಗಿ ವೈಎಸ್‌ಆರ್‌ಸಿಪಿ ಸೇರಿದರು ಇದಾದ ಒಂದೇ ವಾರದಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡುವ ಸುದ್ದಿ ಹೊರಬಿದ್ದಿದೆ. ಹೊಸ ಮಾಹಿತಿಗಳ ಪ್ರಕಾರ ರಾಯುಡು ಜನಸೇನಾ ಅಥವಾ ತೆಲುಗು ದೇಶಂ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರಣ ಈಗಿನ ಗುಂಟೂರು ಸಂಸದ ಗಲ್ಲಾ ಜಯದೇವ್ ಮತ್ತೆ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹಾಗಾಗಿ.. ರಾಯುಡು ಟಿಡಿಪಿ ಸೇರಿದರೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Kantara: ನೀನು ಮುನ್ನಗ್ಗು..ʼಕಾಂತಾರʼ ಸಿನಿಮಾದ ಕುರಿತು ರಿಷಬ್‌ ಶೆಟ್ಟಿಗೆ ಅಭಯ ನೀಡಿದ ದೈವ

ಟಾಪ್ ನ್ಯೂಸ್

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.