ಸಿಂಗಾಪುರ್ ನಲ್ಲಿ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ವಿಧಿವಶ

ಅಮರ್ ಸಿಂಗ್ ಸಮಾಜವಾದಿ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.

Team Udayavani, Aug 1, 2020, 5:09 PM IST

ಸಿಂಗಾಪುರ್ ನಲ್ಲಿ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ವಿಧಿವಶ

ನವದೆಹಲಿ: ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64ವರ್ಷ) ಶನಿವಾರ ಸಿಂಗಾಪುರದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ಚಿಕಿಕ್ಸೆ ಪಡೆಯುತ್ತಿದ್ದರು ಎಂದು ವರದಿ ಹೇಳಿದೆ.

ಅಮರ್ ಸಿಂಗ್ ಸಮಾಜವಾದಿ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಿಂಗ್ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆಪ್ತ ಸ್ನೇಹಿತರಾಗಿದ್ದರು. 2010ರಲ್ಲಿ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ಕೊಟ್ಟಿದ್ದರು. ಬಳಿಕ ಅವರನ್ನು ಸಮಾಜವಾದಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು.

ರಾಜ್ಯ ಸಭೆ ಸದಸ್ಯ ಅಮರ್ ಸಿಂಗ್ ಅವರು ಹತ್ತು ವರ್ಷಕ್ಕಿಂತಲೂ ಹೆಚ್ಚು ಕಾಲ ಅನಾರೋಗ್ಯಕ್ಕೀಡಾಗಿದ್ದು, ಅವರು ಕಿಡ್ನಿ ಕಸಿಗೆ ಒಳಗಾಗಿದ್ದರು ಎಂದು ವರದಿ ತಿಳಿಸಿದೆ.

ಅಮರ್ ಸಿಂಗ್ ರಾಜಕೀಯ ಜೀವನ:

ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕಮ್ಯೂನಿಷ್ಟ್ ಪಕ್ಷ ಹಿಂಪಡೆದ ಪರಿಣಾಮ ಅಲ್ಪಬಹುಮತಕ್ಕೆ ಕುಸಿದಿತ್ತು. ಈ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದವರು ಅಮರ್ ಸಿಂಗ್. ಸಮಾಜವಾದಿ ಪಕ್ಷದ 39 ಸಂಸದರು ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿದ್ದರು. 2010ರ ಜನವರಿ 6ರಂದು ಅಮರ್ ಸಿಂಗ್ ಅವರನ್ನು ಪಕ್ಷದ ಸಂಸದೀಯ ಮಂಡಳಿ ಹಾಗೂ ಪಕ್ಷದಿಂದ ಮುಲಾಯಂ ಸಿಂಗ್ ಯಾದವ್ ಉಚ್ಚಾಟಿಸಿಬಿಟ್ಟಿದ್ದರು. ಅಷ್ಟೇ ಅಲ್ಲ ಅಮರ್ ಸಿಂಗ್ ನಿಕಟವರ್ತಿ ಜಯಾ ಪ್ರದಾ ಅವರನ್ನೂ ಕೂಡಾ ಸಮಾಜವಾದಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

2011ರಲ್ಲಿ ಅಮರ್ ಸಿಂಗ್ “ರಾಷ್ಟ್ರೀಯ ಲೋಕ್ ಮಂಚ್” ಎಂಬ ಸ್ವಂತ ಪಕ್ಷವನ್ನು ಸ್ಥಾಪಿಸಿದ್ದರು. 2012ರಲ್ಲಿ ನಡೆದಿದ್ದ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ 360 ಕ್ಷೇತ್ರಕ್ಕೆ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಒಂದೇ ಒಂದು ಸ್ಥಾನದಲ್ಲಿ ಸಿಂಗ್ ಪಕ್ಷ ಗೆಲುವು ಸಾಧಿಸಲಿಲ್ಲ. 2014ರಲ್ಲಿ ಅಮರ್ ಸಿಂಗ್ ರಾಷ್ಟ್ರೀಯ ಲೋಕ್ ದಳ ಪಕ್ಷ ಸೇರ್ಪಡೆಗೊಂಡಿದ್ದರು. 2014ರಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಸಿಂಗ್ ಫತೇಪುರ್ ಸಿಕ್ರಿಯಿಂದ ಸ್ಪರ್ಧಿಸಿ ಪರಾಜಯಗೊಂಡಿದ್ದರು. 2016ರಲ್ಲಿ ಸಮಾಜವಾದಿ ಪಕ್ಷದ ಬೆಂಬಲದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.