Manipur ನಿಲ್ಲದ ಹಿಂಸಾಚಾರ ; ಮನೆ ಧ್ವಂಸ: ತಪ್ಪು ತಿಳುವಳಿಕೆ ಎಂದ ಕೇಂದ್ರ ಸಚಿವ
RAF ಮತ್ತು ಉದ್ರಿಕ್ತ ಗುಂಪಿನ ನಡುವೆಯೇ ಘರ್ಷಣೆ
Team Udayavani, Jun 16, 2023, 9:01 PM IST
ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ, ಶುಕ್ರವಾರ ಸಂಜೆ ಇಂಫಾಲ್ನಲ್ಲಿ ಮಣಿಪುರದ ಕ್ಷಿಪ್ರ ಕಾರ್ಯಾಚರಣೆ ಪಡೆಯೊಂದಿಗೆ ಉಗ್ರರ ಗುಂಪೊಂದು ಗೋದಾಮಿಗೆ ಬೆಂಕಿ ಹಚ್ಚಿದ ನಂತರ ಘರ್ಷಣೆ ನಡೆಸಿತು.
ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಬಳಸಿದರು, ಉಗ್ರರು ಇತರ ಆಸ್ತಿಗಳನ್ನು ಗುರಿಯಾಗಿಸುತ್ತಿದ್ದರು ಎಂದು ಹೇಳಲಾಗಿದೆ.
ಇಂಫಾಲ ಅರಮನೆ ಮೈದಾನದ ಬಳಿ ಗಲಭೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬಂದಿ ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಗೋದಾಮಿನ ಬೆಂಕಿಯನ್ನು ಹತೋಟಿಗೆ ತಂದರು. ಅಕ್ಕಪಕ್ಕದ ಮನೆಗಳಿಗೆ ಹರಡುವುದನ್ನು ತಪ್ಪಿಸಿದರು. ಈ ಆಸ್ತಿ ಬುಡಕಟ್ಟು ಸಮುದಾಯದ ನಿವೃತ್ತ ಉನ್ನತ ಐಎಎಸ್ ಅಧಿಕಾರಿಗೆ ಸೇರಿತ್ತು ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಇಂಫಾಲ್ ಪಟ್ಟಣದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಯನ್ನು ಗುಂಪು ಧ್ವಂಸಗೊಳಿಸಿದ್ದು, ಅದನ್ನು ಸುಡಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ಇಂಫಾಲ ಪಟ್ಟಣದ ಹೃದಯಭಾಗದಲ್ಲಿ ಮಣಿಪುರದ ರಾಪಿಡ್ ಆಕ್ಷನ್ ಫೋರ್ಸ್ ಮತ್ತು ಜನಸಮೂಹದ ನಡುವಿನ ಘರ್ಷಣೆ ಮತ್ತು ಎರಡು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಗುರುವಾರ ತಡರಾತ್ರಿ ಪಟ್ಟಣದಲ್ಲಿ ಸಂಚರಿಸಿದ ಗುಂಪು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳವಣಿಗೆಗಳ ಬಗ್ಗೆ ಪಿಟಿಐಗೆ ಪ್ರತಿಕ್ರಿಯಿಸಿದ ಆರ್ಕೆ ರಂಜನ್ ಸಿಂಗ್ , “ಮೇ 3 ರಿಂದ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗ ನಾನು ಶಾಂತಿಯನ್ನು ತರಲು ಮತ್ತು ಹಿಂಸಾಚಾರವನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದೇನೆ. ಇದೆಲ್ಲವೂ ಎರಡು ಸಮುದಾಯಗಳ ನಡುವಿನ ತಪ್ಪು ತಿಳುವಳಿಕೆಯಾಗಿದೆ. ಸರಕಾರ ಶಾಂತಿ ಸಮಿತಿ ರಚಿಸಿದ್ದು, ಪ್ರಕ್ರಿಯೆ ನಡೆಯುತ್ತಿದೆ. ನಾಗರಿಕ ಸಮಾಜದ ಮುಖಂಡರು ಒಟ್ಟಿಗೆ ಕುಳಿತಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.